Thursday, September 3, 2026
Thursday, September 3, 2026

ರೂ. 2.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟ ಲೋಕಾರ್ಪಣೆ; ಸ್ವರ್ಣೆಗೆ ಬಾಗಿನ ಸಮರ್ಪಣೆ

ರೂ. 2.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟ ಲೋಕಾರ್ಪಣೆ; ಸ್ವರ್ಣೆಗೆ ಬಾಗಿನ ಸಮರ್ಪಣೆ

Date:

ಉಡುಪಿ, ಆ.12: ಮೂಡುಪೆರಂಪಳ್ಳಿ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನೂತನ ನದಿ ಸ್ನಾನ ಘಟ್ಟ ಲೋಕಾರ್ಪಣೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಹಾಗೂ ದೇವಸ್ಥಾನದ ಪ್ರಮುಖರು ಉಡುಪಿಯ ಜೀವನಾಡಿಯಾಗಿರುವ ಸ್ವರ್ಣ ನದಿಗೆ ಬಾಗಿನ ಸಮರ್ಪಣೆ ಮಾಡುವ ಮೂಲಕ ಲೋಕಾರ್ಪಣೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಇತಿಹಾಸ ಪ್ರಸಿದ್ಧ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟ ಹಲವು ವರ್ಷಗಳಿಂದ ತೀವ್ರ ನದಿ ಕೊರೆತದಿಂದ ಹಾನಿಗೀಡಾಗಿ, ಪ್ರತಿವರ್ಷ ಕೃಷ್ಣಂಗಾರಕ ಚತುರ್ದಶಿಯಂದು ವಿವಿಧ ರಾಜ್ಯಗಳಿಂದ ತೀರ್ಥಸ್ನಾನಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಸಮಸ್ಯೆಗಳ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯ ಮನವಿಯಂತೆ ಸಣ್ಣ ನೀರಾವರಿ ಇಲಾಖೆಯ ಮೂಲಕ 2.25 ಕೋಟಿ ಅನುದಾನ ಒದಗಿಸಿ ಇಂದು ಕೃಷ್ಣಂಗಾರಕ ಚತುರ್ದಶಿಯಂದೇ ಉಡುಪಿಯ ಜೀವನಾಡಿಯಾಗಿ ಕುಡಿಯುವ ನೀರು, ಕೃಷಿ ಚಟುವಟಿಕೆಗೆ ಮೂಲ ಆಸರೆಯಾಗಿರುವ ಸ್ವರ್ಣ ನದಿಗೆ ದೇವಸ್ಥಾನದ ವತಿಯಿಂದ ಬಾಗಿನ ಸಮರ್ಪಣೆ ಮಾಡುವ ಮೂಲಕ ನೂತನ ಸ್ನಾನ ಘಟ್ಟದ ಲೋಕಾರ್ಪಣೆಗೊಳಿಸಲಾಗಿದ್ದು ಮುಂದಿನ ದಿನಗಳಲ್ಲಿಯೂ ದೇವಸ್ಥಾನದ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಸಹಕಾರ ನೀಡುವುದಾಗಿ ಹೇಳಿದರು.

ಉಡುಪಿ ನಗರ ಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಗಣ್ಯರಾದ ಅಜಿತ್ ಪೈ, ರಮೇಶ್ ರಾವ್, ಬಾಲಾಜಿ ರಾಘವೇಂದ್ರ ಆಚಾರ್ಯ, ಯುವ ಬ್ರಾಹ್ಮಣ ಪರಿಷತ್ತಿನ ಚಂದ್ರಕಾಂತ ಕೆ.ಎನ್., ನಾಗರಾಜ ತಂತ್ರಿ, ಹರಿಕೃಷ್ಣ ಶಿವತ್ತಾಯ, ಪ್ರಶಾಂತ ಭಟ್ ಪೆರಂಪಳ್ಳಿ, ಅನಿಟ ಬೆಲಿಂಡಾ ಡಿಸೋಜಾ, ಮಂಜುನಾಥ ಮಣಿಪಾಲ, ಸುಮಾ, ವಿಜಯ ಪೂಜಾರಿ, ಗಣಪತಿ ಭಟ್, ವಾದಿರಾಜ ಆಚಾರ್ಯ, ಬಿಜೆಪಿ ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಶಶಾಂಕ್ ಶಿವತ್ತಾಯ, ಗೋಪಾಲಾಚಾರ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!