Sunday, August 23, 2026
Sunday, August 23, 2026

ಬಾರಕೂರು: ‘ಶೈಕ್ಷಣಿಕ ಸಾಧನೆಗೆ ಕಗ್ಗದ ಪ್ರೇರಣೆ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬಾರಕೂರು: ‘ಶೈಕ್ಷಣಿಕ ಸಾಧನೆಗೆ ಕಗ್ಗದ ಪ್ರೇರಣೆ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Date:

ಬಾರ್ಕೂರು, ಆ.19: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ‘ಶೈಕ್ಷಣಿಕ ಸಾಧನೆಗೆ ಕಗ್ಗದ ಪ್ರೇರಣೆ’ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಎ. ವಿ. ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಅವರು ಮುಖ್ಯ ಉಪನ್ಯಾಸಕರಾಗಿ ಆಗಮಿಸಿ, ಡಿ.ವಿ.ಜಿ. ಅವರ ಮಂಕುತಿಮ್ಮನ ಕಗ್ಗದ ಮೌಲ್ಯಗಳು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಕಗ್ಗವು ಹೇಗೆ ಪ್ರೇರಣೆಯಾಗಬಲ್ಲದು ಎಂಬುದರ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಭಾಸ್ಕರ ಶೆಟ್ಟಿ ಎಸ್. ವಹಿಸಿದ್ದರು. ಸತತ ಅಭ್ಯಾಸ ಮತ್ತು ವಿನಯವು ಅಧ್ಯಯನದ ಸೌಂದರ್ಯವನ್ನು ಹೆಚ್ಚಿಸುತ್ತವೆ ಎಂದು ಹೇಳಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶೈಲಜಾ, ಸಹಾಯಕ ಪ್ರಾಧ್ಯಾಪಕರಾದ ಡಾ. ಪಲ್ಲವಿ ಎನ್., ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಮಟ್ಟದ ರ್‍ಯಾಂಕಿಂಗ್- ಮಾಹೆ ಮತ್ತಷ್ಟು ಪ್ರಗತಿ; ದೇಶದಲ್ಲಿ 7ನೇ ಸ್ಥಾನ

ಮಣಿಪಾಲ, ಆ.22: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ...

ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

ಉಡುಪಿ, ಆ.21: ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು...

ಉಡುಪಿ: ಬ್ಯಾರಿಕೇಡ್‌ ಹಸ್ತಾಂತರ

ಉಡುಪಿ, ಆ.20: ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು...
error: Content is protected !!