Monday, August 24, 2026
Monday, August 24, 2026

ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

Date:

ಉಡುಪಿ, ಆ.23: ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಡಿ ಕನ್ಯಾನ ಜೆಟ್ಟಿ ಎದುರಿನ ಹೊಳೆಯಲ್ಲಿ ಸಮುದ್ರದ ಅಳಿವೆವರೆಗೆ ಹೂಳೆತ್ತುವ ಕಾಮಗಾರಿಯಲ್ಲಿ ಹೂಳೆತ್ತಿ ಸಂಗ್ರಹಿಸಿರುವ ಮರಳು ಮಿಶ್ರಿತ ಹೂಳನ್ನು ತೆರವುಗೊಳಿಸುವ ಕಾಮಗಾರಿ ಸ್ಥಳದಲ್ಲಿರುವ 21 ಅಕೇಶಿಯಾ, 8 ಮ್ಯಾಂಜಿಯಂ ಹಾಗೂ 35 ಗಾಳಿ ಜಾತಿಯ ಮರಗಳು ಸೇರಿದಂತೆ ಒಟ್ಟು 64 ಗಿಡ – ಮರಗಳನ್ನು ಕಡಿಯಲು ಉದ್ದೇಶಿಸಿದ್ದು, ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ಪ್ರಕರಣದಡಿ 50 ಕ್ಕಿಂತ ಹೆಚ್ಚಿನ ಮರಗಳು ಕಡಿಯಬೇಕಾದಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ, ಕ್ರಮ ಕೈಗೊಳ್ಳಬೇಕಾಗಿರುವ ಹಿನ್ನೆಲೆ, ಸೆಪ್ಟಂಬರ್ 2 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಆಯೋಜಿಸಲಾಗಿದೆ. ಸಾರ್ವಜನಿಕರಿಂದ ಮರಗಳ ಕಡಿಯುವ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಖುದ್ದಾಗಿ ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗಾಗಿ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ, ಕುಂದಾಪುರ – 576201 ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ಮೂಲಕವೂ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಎಲ್.ಎ-2ಗಳ ಸಭೆ

ಉಡುಪಿ, ಆ.23: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಸರಣಿ ಉಪನ್ಯಾಸ ಮಾಲಿಕೆ ಉದ್ಘಾಟನೆ

ಕುಂದಾಪುರ, ಆ.23: ವಿದ್ಯಾರ್ಥಿ ದೆಸೆಯಲ್ಲಿ ದೇಹ, ಬುದ್ದಿ, ಭಾವನೆ, ಆತ್ಮಕ್ಕೆ ಶಿಕ್ಷಣ...

ತೆಂಕನಿಡಿಯೂರು ಕಾಲೇಜು: ವಿವೇಕಾನಂದರ ಚಿಂತನೆಯ ವಿಶೇಷ ಉಪನ್ಯಾಸ ಕಾರ್ಯಕ್ರಮ

ಮಲ್ಪೆ, ಆ.23: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ತ್ರಿಶಾ ವಿದ್ಯಾ ಕಾಲೇಜು: ‘ವಂದೇ ಮಾತರಂ ಮತ್ತು ಸ್ವಾತಂತ್ರ್ಯ’ ವಿಶೇಷ ಕಾರ್ಯಕ್ರಮ

ಕಟಪಾಡಿ, ಆ.23: ಅಖಿಲ ಭಾರತೀಯ ಸಾಹಿತ್ಯ ಪರಿಷತ್ (ನೋಂ.) ಉಡುಪಿ ಜಿಲ್ಲಾ...
error: Content is protected !!