Tuesday, August 25, 2026
Tuesday, August 25, 2026

ದೇಶದ ಪ್ರಗತಿಯಲ್ಲಿ ಕೃಷಿ, ಹೈನುಗಾರಿಕೆಯ ಪಾತ್ರ ಪ್ರಮುಖವಾಗಿದೆ: ಉಮೇಶ್ ಕುಂದರ್

ದೇಶದ ಪ್ರಗತಿಯಲ್ಲಿ ಕೃಷಿ, ಹೈನುಗಾರಿಕೆಯ ಪಾತ್ರ ಪ್ರಮುಖವಾಗಿದೆ: ಉಮೇಶ್ ಕುಂದರ್

Date:

ಕೋಟ, ಆ.24: ದೇಶದ ಸುಭಿಕ್ಷೆಗೆ ಕೃಷಿ ಮತ್ತು ಹೈನುಗಾರಿಕೆ ಮೂಲ ಕಾರಣವಾಗಿದೆ ಎಂದು ಕೆ.ಎಂ.ಎಫ್ ವಿಸ್ತರಣಾಧಿಕಾರಿ ಉಮೇಶ್ ಕುಂದರ್ ಹೇಳಿದರು. ಸೋಮವಾರ ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಂಘದ ಅಧ್ಯಕ್ಷರಾದ ವಲೇರಿಯನ್ ಡಿಸೋಜ ಅಧ್ಯಕ್ಷತೆ ವಹಿಸಿ ಸಾಮಾನ್ಯ ಸಭೆಯನ್ನು ನಡೆಸಿಕೊಟ್ಟರು. 25-26ನೇ ಸಾಲಿನಲ್ಲಿ ಸಂಘಕ್ಕೆ ಹೆಚ್ಚು ಹಾಲು ನೀಡಿ ಪ್ರಥಮ ಬಹುಮಾನ ಪಡೆದ ಜೂಡಿಪ್ ಪಿಕಾರ್ಡೋ ಇವರಿಗೆ ನಗದು ಇನ್ನುಳಿದ ಹೈನುಗಾರರಿಗೆ ಪರಿಕರ ರೂಪದಲ್ಲಿ ಬಹುಮಾನ ನೀಡಿ ಗೌರವಿಸಲಾಯಿತು. ಹಾಲು ಉತ್ಪಾದಕರಿಗೆ ಬೋನಸ್ ಹಾಗೂ ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಯಿತು.

ಸಂಘದ ಉಪಾಧ್ಯಕ್ಷೆ ಶ್ಯಾಮಲ ದೇವಾಡಿಗ, ನಿರ್ದೇಶಕರುಗಳಾದ ಜಲಜ ಬಿ ಪೂಜಾರಿ, ವಸುಧಾ ಪಿಎನ್ ಬಾಯರಿ, ಜಯಂತ ಪೂಜಾರಿ, ನಾಗರತ್ನ ಮಡಿವಾಳ, ಲಲಿತಾ ಪೂಜಾರಿ, ಡಯಾನಾ ಪಿಂಟೋ, ದಾಕ್ಷಾಯಿನಿ, ಮೈನಾ ಬಿ ಸಾಲಿಯಾನ್ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ಯಾಮಲ ಪಾಂಡೇಶ್ವರ ಸಂಘದ ನಡಾವಳಿ, ವರದಿ, ಲೆಕ್ಕಪತ್ರ, ಆಯವ್ಯಯ ವಾಚಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಹಾಯಕಿ ಸುಜಾತ ವೆಂಕಟೇಶ ಸಹಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆ. 27: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಆ.24: ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು...

ತೆಂಕನಿಡಿಯೂರು ಕಾಲೇಜು: ‘ಹೊಸ ದಿಗಂತ’- ಪ್ರಥಮ ವರ್ಷದ ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ ಉದ್ಘಾಟನೆ

ತೆಂಕನಿಡಿಯೂರು, ಆ.24: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ...

ಕ್ರೀಡಾ ಕ್ಷೇತ್ರದಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

ಗಣಿತನಗರ, ಆ.24: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...
error: Content is protected !!