Friday, August 28, 2026
Friday, August 28, 2026

ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ

ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ

Date:

ಉಡುಪಿ, ಆ.26: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಆಶ್ರಯದಲ್ಲಿ ‘ಉಡುಪಿಗೆ ಬನ್ನಿ’ ನೇತೃತ್ವದಲ್ಲಿ ಎನ್.ಎನ್. ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್, ಚಿತ್ರಕೂಟ ಆಯುರ್ವೇದ, ಅನಂತ ವೈದಿಕ ಕೇಂದ್ರ ಉಡುಪಿ ಸಹಕಾರದೊಂದಿಗೆ ವಿಟ್ಲಪಿಂಡಿ ಪ್ರಯುಕ್ತ ‘ಕೃಷ್ಣ ರಂಗ’ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯ ಪೋಸ್ಟರ್ ಅನ್ನು ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಬಿಡುಗಡೆಗೊಳಿಸಿ ಸ್ಪರ್ಧೆಯು ಯಶಸ್ವಿಯಾಗಿ ನಡೆಯಲಿ ಎಂದು ಅನುಗ್ರಹ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ‘ಉಡುಪಿಗೆ ಬನ್ನಿ’ ನಿರ್ವಾಹಕರಾದ ಡಾ. ಗಣೇಶ್ ಪ್ರಸಾದ್ ಜಿ. ನಾಯಕ್, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗೀಯ ಅಧ್ಯಕ್ಷರಾದ ಉದಯ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.

ಸ್ಪರ್ಧೆಯ ವಿವರ: ಸ್ಪರ್ಧಿಗಳು ಸೆಪ್ಟೆಂಬರ್ 5 ರಂದು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ವಿಟ್ಲಪಿಂಡಿಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಆಯ್ದ ಅಂಶಗಳನ್ನು ರೀಲ್ಸ್ ನಲ್ಲಿ ಪ್ರಸ್ತುತಪಡಿಸಬೇಕು. ರೀಲ್ಸ್ ಅನ್ನು ಇನ್ಸ್ಟಾಗ್ರಾಮ್ ನಲ್ಲಿ ಪ್ರಕಟಿಸಿ ‘ಉಡುಪಿಗೆ ಬನ್ನಿ’ ಕೊಲೇಬೊರೇಟ್ ಮಾಡಬೇಕು. ರೀಲ್ಸ್ ಕಳುಹಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು ಫಲಿತಾಂಶವನ್ನು ಸೆಪ್ಟೆಂಬರ್ 19 ಕ್ಕೆ ಪ್ರಕಟಿಸಲಾಗುವುದು. ಪ್ರಥಮ ಬಹುಮಾನ ರೂ. ಹತ್ತು ಸಾವಿರ ಮತ್ತು ಪ್ರಶಸ್ತಿ ಪತ್ರ, ದ್ವಿತೀಯ ಬಹುಮಾನ ರೂ. ಐದು ಸಾವಿರ ಮತ್ತು ಪ್ರಶಸ್ತಿ ಪತ್ರ ಮತ್ತು 5 ಮಂದಿಗೆ ರೂ. ಒಂದು ಸಾವಿರ ಸಮಾಧಾನಕರ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಸ್ಪರ್ಧಿಸಿದ ಪ್ರತಿಯೊಬ್ಬರಿಗೂ ಪಾರ್ಟಿಸಿಪೇಶನ್ ಸರ್ಟಿಫಿಕೇಟ್ ನೀಡಲಾಗುವುದು ಮತ್ತು ಸ್ಪರ್ಧೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ‘ಉಡುಪಿಗೆ ಬನ್ನಿ’ ಇನ್ಸ್ಟಗ್ರಾಮ್ ಪೇಜ್ ನಲ್ಲಿ ನೋಡಬಹುದು ಎಂದು ಆಯೋಜಕರ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 359ಕ್ಕೆ ಏರಿಕೆ, 1300 ಕ್ಕೂ ಹೆಚ್ಚು ಜನರು ನಾಪತ್ತೆ

ಯು.ಬಿ.ಎನ್.ಡಿ., ಆ.27: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ...

ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ

ಉಡುಪಿ, ಆ.27: ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಹಠಾತ್ ಭೀಕರ...
error: Content is protected !!