ಕುಂದಾಪುರ, ಆ.27: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಬೈಂದೂರಿನ ಯಡ್ತರೆ ಗ್ರಾಮದಲ್ಲಿ ಕುಂದಗನ್ನಡ ಪ್ರತಿಷ್ಠಾನ ಆಯೋಜಿಸಿದ ‘ಗಮ್ಮತ್’ ಕೆಸರಲ್ಲೊಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕುಂದಗನ್ನಡ ಭತ್ತ ಕುಟ್ಟುವ ಹಾಡು ಮತ್ತು ಗಾದೆಗಳನ್ನು ಹೇಳುವ ಮೂಲಕ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು. ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಕುಂದಗನ್ನಡ ಸಂಘದ ಸಂಯೋಜಕರಾದ ರೇಷ್ಮಾ ಶೆಟ್ಟಿ ಮತ್ತು ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು.
ಯಡ್ತರೆ: ‘ಕೆಸರಲ್ಲೊಂದಿನ’ ಕಾರ್ಯಕ್ರಮ
ಯಡ್ತರೆ: ‘ಕೆಸರಲ್ಲೊಂದಿನ’ ಕಾರ್ಯಕ್ರಮ
Date:




By
ForthFocus™