ಉಡುಪಿ, ಸೆ.1: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜು ಯಡಾಡಿ ಮತ್ಯಾಡಿ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ಕಾಲೇಜುಗಳ ಕುಂದಾಪುರ ತಾಲೂಕು ಮಟ್ಟದ ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟದಲ್ಲಿ ತಮ್ಮ ಉತ್ತಮ ನಿರ್ವಹಣೆಯ ಮೂಲಕ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸ್ನೇಹಾ ಎನ್ ಮೇಸ್ತ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ದೈಹಿಕ ಶಿಕ್ಷಣ ಉಪನ್ಯಾಸಕರಾದ ಉಮೇಶ್ ಶೆಟ್ಟಿ ತರಬೇತಿ ನೀಡಿರುತ್ತಾರೆ.
ಇವರು ನಾಗರಾಜ ಮೇಸ್ತ ಮತ್ತು ನಯನ ಮೇಸ್ತ ದಂಪತಿಯ ಪುತ್ರಿ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಮತ್ತು ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.




By
ForthFocus™