Tuesday, September 8, 2026
Tuesday, September 8, 2026

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

Date:

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ ಯಾವುದಾದರೊಂದು ಸನ್ನಿವೇಶವನ್ನು ಕಲಾತ್ಮಕವಾಗಿ ಚಿತ್ರಿಸುತ್ತವೆ. ಅವುಗಳಲ್ಲಿ ಮನುಷ್ಯನನ್ನು ಬದುಕಿನ ಬಗ್ಗೆ ಗಂಭೀರವಾಗಿ ಚಿಂತಿಸುವಂತೆ ಮಾಡಬಲ್ಲ ಮೌಲ್ಯ ಸಂದೇಶಗಳಿದ್ದರೆ ಕಥೆಗಳ ಘನತೆ ಇನ್ನೂ ಹೆಚ್ಚಾಗುತ್ತದೆ. ಪಾರ್ವತಿ ಐತಾಳರ ಕಥೆಗಳು ನೋಟಕ್ಕೆ ಸರಳವಾಗಿ ಕಂಡರೂ ಅವುಗಳಲ್ಲಿ ಬದುಕಿನ ಬಗೆಗಿನ ಗಂಭೀರ ಹಾಗೂ ಸೂಕ್ಷ್ಮ ಒಳನೋಟಗಳಿರುವ ಸತ್ಯವನ್ನು ಅಲ್ಲಗಳೆಯುವ ಹಾಗಿಲ್ಲ ಎಂದು ಲೇಖಕ-ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಹೇಳಿದರು. ಇಲ್ಲಿನ ಜನಪ್ರತಿನಿಧಿ ಪತ್ರಿಕಾ ಕಚೇರಿಯಲ್ಲಿ ನಡೆದ ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ‘ಘಾತ’ ಕಥಾಸಂಕಲನದ ಕುರಿತು ಅವರು ಮಾತನಾಡಿದರು. ಲೇಖಕಿ-ಉಪನ್ಯಾಸಕಿ ಸುಮತಿ ಶೆಣೈಯವರು ಪಾರ್ವತಿ ಐತಾಳರ ‘ಮಲೆಯಾಳ ಸಾಹಿತ್ಯದ ಆರಂಭ ಕಾಲ’ ಎಂಬ ಇನ್ನೊಂದು ಕೃತಿಯ ಬಗ್ಗೆ ಮಾತನಾಡಿ, ಯಾವುದೇ ಸಾಹಿತ್ಯದ ಬೆಳವಣಿಗೆಗೆ ಓದುಗರು ಇತರ ಭಾಷೆಯ ಕೃತಿಗಳನ್ನು ಓದುವುದು ಮಾತ್ರವಲ್ಲದೆ ಆ ಭಾಷೆಯ ಸಾಹಿತ್ಯವು ನಡೆದು ಬಂದ ದಾರಿ ಹಾಗೂ ಅದರ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ಈ ದೃಷ್ಟಿಯಿಂದ ಮಲೆಯಾಳ ಸಾಹಿತ್ಯದ ಚರಿತ್ರೆಯ ಒಳನೋಟವನ್ನು ನೀಡುವ ಈ ಕೃತಿ ಅತ್ಯಂತ ಮಹತ್ವದ್ದಾಗಿದೆ’ ಎಂದರು.

ಆರಂಭದಲ್ಲಿ ಕೃತಿಗಳ ಕರ್ತೃ ಪಾರ್ವತಿ ಜಿ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜನಪ್ರತಿನಿಧಿ ಪತ್ರಿಕೆಯ ಸಂಪಾದಕರಾದ ಸುಬ್ರಹ್ಮಣ್ಯ ಪಡುಕೋಣೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಲೇಖಕಿ ವಿಮಲಾ ನಾವುಡ ಉಪಸ್ಥಿತರಿದ್ದರು. ಸುಮನಾ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು. ಜೆಸ್ಸಿ ಎಲಿಝಬೆತ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!