Thursday, September 19, 2024
Thursday, September 19, 2024

ಐಸಿಸ್ ಮಾನಸಿಕತೆಯ ಮತಾಂಧ ಶಕ್ತಿಗಳಿಗೆ ಸಂಘಟಿತ ಹಿಂದೂ ಸಮಾಜದಿಂದ ಮಾತ್ರ ತಕ್ಕ ಉತ್ತರ ಸಾಧ್ಯ: ಯಶ್ಪಾಲ್ ಸುವರ್ಣ ಆಕ್ರೋಶ

ಐಸಿಸ್ ಮಾನಸಿಕತೆಯ ಮತಾಂಧ ಶಕ್ತಿಗಳಿಗೆ ಸಂಘಟಿತ ಹಿಂದೂ ಸಮಾಜದಿಂದ ಮಾತ್ರ ತಕ್ಕ ಉತ್ತರ ಸಾಧ್ಯ: ಯಶ್ಪಾಲ್ ಸುವರ್ಣ ಆಕ್ರೋಶ

Date:

ಉಡುಪಿ: ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ಹಿಂದೂ ಕನಯ್ಯ ಲಾಲ್ ರವರ ಅಮಾನುಷ ಕಗ್ಗೊಲೆ ಮತಾಂಧ ಶಕ್ತಿಗಳ ವಿಕೃತ ಐಸಿಸ್ ಮಾನಸಿಕತೆಗೆ ಸಾಕ್ಷಿಯಾಗಿದ್ದು, ಘಟನೆಯ ಬಗ್ಗೆ ಜಾತ್ಯತೀತವಾದಿ, ಸ್ವಯಂ ಘೋಷಿತ ವಿಚಾರವಾದಿಗಳ ದಿವ್ಯ ಮೌನ ದೇಶದ ಆಂತರಿಕ ಭದ್ರತೆಗೆ ಆತಂಕಕಾರಿ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂಪುರ್ ಶರ್ಮ ಹೇಳಿಕೆಯನ್ನು ಸಮರ್ಥಿಸಿದ ಎಂಬ ಏಕೈಕ ಕಾರಣಕ್ಕೆ ಅಮಾನುಷವಾಗಿ ಹತ್ಯೆ ಮಾಡಿ, ಘಟನೆಯ ವೀಡಿಯೋ ಮಾಡಿ ಪ್ರಧಾನಿ ನರೇಂದ್ರ ಮೋದಿ ಯವರನ್ನೂ ಹತ್ಯೆ ಬೆದರಿಕೆಯೊಡ್ಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಷ್ಟೀಯ ತನಿಖಾದಳದ ಮೂಲಕ ತನಿಖೆ ನಡೆಯುತ್ತಿದ್ದು ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮದ ಭರವಸೆಯಿದೆ. ಸಂಘಟಿತ ಹಿಂದೂ ಸಮಾಜ ಮಾತ್ರ ಈ ಐಸಿಸ್ ಮಾನಸಿಕತೆಯ ಮತಾಂಧ ಶಕ್ತಿಗಳಿಗೆ ದಿಟ್ಟ ಉತ್ತರ ನೀಡಲು ಸಾಧ್ಯವಿದೆ. ಇಸ್ಲಾಮೀ ಭಯೋತ್ಪಾದನೆ ಮೂಲಕ ಸಮಾಜದಲ್ಲಿ ಆಂತರಿಕ ಭದ್ರತೆಗೆ ಸವಾಲೊಡ್ಡಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಯತ್ನಿಸುತ್ತಿರುವ ಮತೀಯವಾದಿಗಳ ವಿರುದ್ಧ ಬಹು ಸಂಖ್ಯಾತ ಸಮಾಜ ಸ್ವಯಂ ಜಾಗೃತರಾಗಬೇಕಾದ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ. ಲವ್ ಜೆಹಾದ್, ಹಿಜಾಬ್ ಮುಂತಾದ ವಿವಾದಗಳನ್ನು ಸೃಷ್ಟಿಸಿ ದೇಶದಾದ್ಯಂತ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ಷಡ್ಯಂತ್ರದ ಮುಂದುವರಿದ ಭಾಗವಾಗಿ ರಾಜಸ್ಥಾನದ ಅಮಾನುಷ ಘಟನೆ ನಡೆದಿದೆ.

ರಾಷ್ಟೀಯವಾದಿ ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಬೆದರಿಕೆಯ ಮೂಲಕ ದೇಶಪ್ರೇಮಿ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸುವ ಮತೀಯವಾದಿ ಶಕ್ತಿಗಳಿಗೆ ಜಾಗೃತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!