Friday, September 11, 2026
Friday, September 11, 2026

ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರ ಪ್ರದರ್ಶನ

ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರ ಪ್ರದರ್ಶನ

Date:

ಉಡುಪಿ, ಸೆ.11: ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರದ ಮೂರು ಉಚಿತ ಪ್ರದರ್ಶನಗಳು ಗುರುವಾರ ಉಡುಪಿಯ ಗೀತಾ ಮಂದಿರದ ನೃಸಿಂಹ ಸಭಾಂಗಣದಲ್ಲಿ ಪುತ್ತಿಗೆ ಶ್ರೀಗಳಧ್ವಯರ ಆಶೀರ್ವಾದದೊಂದಿಗೆ ಯಶಸ್ವಿಯಾಗಿ ಪ್ರದರ್ಶನಗೊಂಡವು.

ಈ ಸಂದರ್ಭದಲ್ಲಿ ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನದ ಮುಖ್ಯಸ್ಥರಾದ ವೀಣಾ ಬನ್ನಂಜೆ ಅವರನ್ನು ಬನ್ನಂಜೆ ಅಭಿಮಾನಿ ಬಳಗ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಗೌರವಿಸಲಾಯಿತು.

ಚಲನಚಿತ್ರದಲ್ಲಿ ಪ್ರದಾನ ಪಾತ್ರದಲ್ಲಿ ನಟಿಸಿದ ಭಾಸ್ಕರ್ ರಾವ್ ಹಾಗೂ ಕೃಷ್ಣರಾಜ್ ಭಟ್ ಕುತ್ಪಾಡಿಯವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಬನ್ನಂಜೆ 90 ನಮನ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿ ಆಸ್ಟ್ರೋ ಮೋಹನ್, ಕಾರ್ಯದರ್ಶಿ ಜನಾರ್ದನ ಕೊಡವೂರು, ಕೋಶಾಧಿಕಾರಿ ಪ್ರೊ. ಸದಾಶಿವ ರಾವ್, ರಾಜೇಶ್ ಭಟ್ ಪಣಿಯಾಡಿ, ಪಂಚಮಿ ಟ್ರಸ್ಟಿನ ಮುಖ್ಯಸ್ಥ ಡಾ. ಎಂ. ಹರೀಶ್ಚಂದ್ರ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿ ರಂಜಿನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ದೀಪಾ ಕರ್ಕಿ, ಚಂದ್ರಕಾಂತ್ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

ಉಡುಪಿ, ಸೆ.11: ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ಪಲ್ಸ್ ಇವೆಂಟ್ ಇವರಿಂದ...

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...
error: Content is protected !!