Monday, September 14, 2026
Monday, September 14, 2026

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Date:

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 2 ಇದರ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಡಾ. ಶೇಷಪ್ಪ ಅಮೀನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಸಮಾಜದ ಒಳಿತಿಗಾಗಿ ವಿದ್ಯಾರ್ಥಿಗಳು ತಮ್ಮ ಸಮಯ ಮತ್ತು ಶ್ರಮವನ್ನು ವಿನಿಯೋಗಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಉಮೇಶ್ ಶೆಟ್ಟಿ ಮಾತನಾಡಿ, ಎನ್.ಎಸ್.ಎಸ್. ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ಸಮಾಜದ ವಿವಿಧ ಸಮಸ್ಯೆಗಳನ್ನು ಅರಿತುಕೊಂಡು, ಅವುಗಳ ಪರಿಹಾರಕ್ಕಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ ಪ್ರಸಕ್ತ ಶೈಕ್ಷಣಿಕ ವರ್ಷದ ಎನ್. ಎಸ್. ಎಸ್ ಘಟಕದ ಕ್ರಿಯಾಯೋಜನೆಗಳ ವರದಿ ಮಂಡಿಸಿದರು. ಎನ್ಎಸ್ಎಸ್ ಸ್ವಯಂಸೇವಕ ಪ್ರತಿನಿಧಿ ರೋನಿತ್ ಶೆಟ್ಟಿ ಸ್ವಾಗತಿಸಿ, ಪ್ರತೀಕ್ಷಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ರಜತ್ ವಂದಿಸಿದರು. ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...
error: Content is protected !!