Sunday, September 20, 2026
Sunday, September 20, 2026

ಕೊಡವೂರು ದೇವಳದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ

ಕೊಡವೂರು ದೇವಳದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ

Date:

ಉಡುಪಿ, ಸೆ.18: ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಶ್ರೀದೇವಳದಲ್ಲಿ ನಡೆಯಲಿರುವ ದುರಸ್ತಿ ಕಾರ್ಯಗಳು, ಪ್ರಾಯಶ್ಚಿತ ಕೆಲಸಗಳ ಸಲುವಾಗಿ ತಾಂಬೂಲ ಪ್ರಶ್ನೆ ಚಿಂತನೆ ಇಡಲಾಯಿತು.

ವಿದ್ವಾನ್ ಗೋಪಾಲ ಜೋಯಿಸರು ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗು ಪುತ್ತೂರು ವಾದಿರಾಜ ತಂತ್ರಿ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಯನ್ನು ನೆರವೇರಿಸಿದರು. ಪ್ರಾರಂಭದಿಂದ ಕೊನೆಯತನಕವು ಒಳ್ಳೆಯ ರಾಶಿ ಮೂಲಕ ಆಡಳಿತ ಮಂಡಳಿ ಕಾರ್ಯಗತಗೊಳಿಸುತ್ತಿರುವ ಕಾಮಗಾರಿಗಳಿಗೆ ದೇವರ ಅಪ್ಪಣೆ ಸಿಕ್ಕಿತು.

ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ತೊಟ್ಟಂ ಮಧುಸೂದನ ತಂತ್ರಿ, ಪವಿತ್ರಪಾಣಿ ಜನಾರ್ದನ್ ಕೊಡವೂರು, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸೀತಾರಾಮ ಆಚಾರ್ಯ, ವಾದಿರಾಜ ಸಾಲ್ಯಾನ್, ಭಾಸ್ಕರ್ ಪಾಲನ್, ಕೆ. ಬಾಬ, ಉಷಾ ಆನಂದ ಸುವರ್ಣ, ಶೀಲಾ ದೇವಾಡಿಗ, ಚಂದನ್ ಭಟ್, ಭಕ್ತವೃಂದ ಕಾರ್ಯದರ್ಶಿ ರಾಮ ಸೇರಿಗಾರ್, ಭಗವತಿ ಮಾರಿ ಅಮ್ಮ ಕಟ್ಟದಬಡ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಟಿ., ಶಿವಪ್ಪ ಕಾಂಚನ್, ವಾಸುದೇವ ಉಪಾಧ್ಯ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ, ಸೆ.18: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ...

ಸೆ. 21 ರಂದು ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.19: ನಗರದ ಓಮ್ನಿಯಾನ್ ಪ್ರೀಮಿಡಿಯಾ ಪ್ರೆವೇಟ್ ಲಿಮಿಟೆಡ್, ರೀಗಲ್ ಎಂಟ್ರಿ,...

ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮಂಗಳೂರು, ಸೆ.18: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಕೇಂದ್ರ...
error: Content is protected !!