Friday, October 11, 2024
Friday, October 11, 2024

ಉಡುಪಿ ಅಂಚೆ ವಿಭಾಗದಿಂದ ಸ್ವಚ್ಛ ಭಾರತ- ಸ್ವಚ್ಛ ನಡಿಗೆ

ಉಡುಪಿ ಅಂಚೆ ವಿಭಾಗದಿಂದ ಸ್ವಚ್ಛ ಭಾರತ- ಸ್ವಚ್ಛ ನಡಿಗೆ

Date:

ಉಡುಪಿ: ಜನಸಾಮಾನ್ಯರಿಗೆ ಹತ್ತಿರವಾದ ಭಾರತೀಯ ಅಂಚೆ ಇಲಾಖೆ ಜನಮಾನಸದಲ್ಲಿ ಉಳಿಯುವಂತಹ ಜನಜಾಗೃತಿ ಕೆಲಸವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅಭಿಪ್ರಾಯಪಟ್ಟರು. ಸ್ವಚ್ಛತಾ ಪಾಕ್ಷಿಕದ ಅಂಗವಾಗಿ ಭಾರತೀಯ ಅಂಚೆ ಇಲಾಖೆ, ಉಡುಪಿ ಅಂಚೆ ವಿಭಾಗ ಹಮ್ಮಿಕೊಂಡ ಸ್ವಚ್ಛ ಭಾರತ- ಸ್ವಚ್ಛತಾ ನಡಿಗೆ ಕಾರ್ಯಕ್ರಮವನ್ನು ಶಾಂತಿಯ ದೂತ, ಸಂದೇಶ ರವಾನೆಯ ಸಂಕೇತ ಪಾರಿವಾಳಗಳನ್ನು ಹಾರಿಸಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಂವಹನ ಕ್ಷೇತ್ರದಲ್ಲಿ ಅಂದಿಗೂ ಇಂದಿಗೂ ಮನೆ ಮಾತಾಗಿರುವ ಭಾರತೀಯ ಅಂಚೆ ಇಲಾಖೆ ಹಾಗೂ ಅಂಚೆ ಅಣ್ಣನ ಘನತೆ ಇಂದಿಗೂ ಪ್ರಸ್ತುತ.

ಹಾಗಾಗಿ ಆಧುನಿಕ ಕಾಲಮಾನಕ್ಕೆ ತಕ್ಕಂತೆ ಬದಲಾಗುತ್ತಾ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿರುವ ಅಂಚೆ ಇಲಾಖೆ ಸ್ತುತ್ಯರ್ಹ ಎಂದು ಶುಭ ಹಾರೈಸಿದರು.

ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ನವೀನ್ ಚಂದರ್ ಸ್ವಾಗತಿಸಿ, ಸಹಾಯಕ ಅಂಚೆ ಅಧೀಕ್ಷಕರಾದ ಜಯರಾಮ ಶೆಟ್ಟಿ ವಂದಿಸಿದರು. ಪೂರ್ಣಿಮಾ ಜನಾರ್ದನ್ ಹಾಗೂ ಸವಿತಾ ಶೆಟ್ಟಿಗಾರ್ ನಿರೂಪಿಸಿದರು.

ಉಡುಪಿ ಪ್ರಧಾನ ಅಂಚೆ ಕಚೇರಿಯಿಂದ ಕವಿ‌ಮುದ್ದಣ ಮಾರ್ಗವಾಗಿ ಸ್ವಚ್ಚತಾ ಜಾಥಾ ಮುಂದುವರೆದು ಮತ್ತೆ ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಸಮಾಪನಗೊಂಡಿತು. ಉಡುಪಿ ಪ್ರಧಾನ ಅಂಚೆ ಕಚೇರಿ, ಮಣಿಪಾಲ ಅಂಚೆ ಕಚೇರಿ, ಕುಂದಾಪುರ ಅಂಚೆ ಕಚೇರಿ, ರೇಲ್ವೇ ಮೇಲ್ ಸರ್ವಿಸ್, ವಿಭಾಗೀಯ ಅಂಚೆ ಕಚೇರಿ ಮತ್ತು ಉಡುಪಿ ಅಂಚೆ ವಿಭಾಗದ ಇತರ ಅಂಚೆ ಕಚೇರಿಯ ಸಿಬ್ಬಂದಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ

ಮುಂಬಯಿ, ಅ.11: ಟಾಟಾ ಗ್ರೂಪ್‌ನ ಅಂಗವಾದ ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯೆಲ್...

ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಲ್ಲಿ ತಾಂತ್ರಿಕ ಸಮಸ್ಯೆ; ತುರ್ತು ಲ್ಯಾಂಡಿಂಗ್

ತಿರುಚಿರಾಪಳ್ಳಿ, ಅ.11: ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ...

ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಡಿಕ್ಕಿ

ಯು.ಬಿ.ಎನ್.ಡಿ., ಅ.11: ಶುಕ್ರವಾರ ರಾತ್ರಿ 8.50ರ ಸುಮಾರಿಗೆ ಚೆನ್ನೈ ವಿಭಾಗದ ಗುಮ್ಮಿಡಿಪೂಂಡಿ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಸಮಿತಿಗಳ ಉದ್ಘಾಟನೆ

ಮಂಗಳೂರು, ಅ.11: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ...
error: Content is protected !!