Tuesday, February 25, 2025
Tuesday, February 25, 2025

ರಾಜ್ಯಸಭೆ ಘನತೆಗೆ ಮೆರುಗು ತಂದ ಡಾ| ಡಿ. ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ: ಯಶ್ಪಾಲ್ ಸುವರ್ಣ

ರಾಜ್ಯಸಭೆ ಘನತೆಗೆ ಮೆರುಗು ತಂದ ಡಾ| ಡಿ. ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ: ಯಶ್ಪಾಲ್ ಸುವರ್ಣ

Date:

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯಸಭಾ ಸದಸ್ಯರಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರನ್ನು ನಾಮ ನಿರ್ದೇಶನ ಮಾಡುವ ಮೂಲಕ ಚಿಂತಕರ ಚಾವಡಿ ಎಂದು ಕರೆಯಲ್ಪಡುವ ರಾಜ್ಯಸಭೆಯ ಘನತೆಗೆ ಮೆರುಗು ನೀಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಅನ್ನ, ಅಭಯ, ವಿದ್ಯೆ, ಶಿಕ್ಷಣದ ಮೂಲಕ ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ, ಧರ್ಮ ಜಾಗೃತಿ, ಆರೋಗ್ಯ, ಸ್ತ್ರೀ ಶಕ್ತಿ ಸಂಘಟನೆಯ ಮೂಲಕ ಮಹಿಳಾ ಸಶಕ್ತೀಕರಣ, ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಜನರ ಆರ್ಥಿಕತೆ ಸಬಲೀಕರಣ, ಮದ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಜನ ಜಾಗೃತಿ, ವರದಕ್ಷಿಣೆ ಪಿಡುಗು ನಿಯಂತ್ರಿಸಿ ಸರಳ ವಿವಾಹ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವು ದಶಕಗಳಿಂದ ನಿರಂತರ ಸಾಮೂಹಿಕ ವಿವಾಹ ಆಯೋಜನೆಯ ಮೂಲಕ ಹಲವು ಕ್ಷೇತ್ರದಲ್ಲಿ ಸಮಾಜ ಸೇವೆಯ ಮೂಲಕ ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಚಿಂತನೆ ರಾಜ್ಯ ಸಭೆಯ ಸಂಸದರಾಗಿ ದೇಶದಾದ್ಯಂತ ಕಾರ್ಯರೂಪಗೊಳ್ಳಲು ಸಹಕಾರಿಯಾಗಲಿದೆ.

ಅತ್ಯಂತ ಅರ್ಹ ವ್ಯಕ್ತಿಗೆ ಸಾಧನೆಯನ್ನು ಗುರುತಿಸಿ ಮಹತ್ವದ ಹುದ್ದೆಯನ್ನು ನೀಡಿ ಗೌರವಿಸಿದ ಪ್ರಧಾನಿ ನರೇಂದ್ರ ಮೋದಿ ಯವರಿಗೆ ಹಾಗೂ ಮುಂದಿನ ದಿನಗಳಲ್ಲಿ ಖಾವಂದರಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮೂಡಿಬರಲಿ ಎಂಬ ಶುಭ ಹಾರೈಕೆಯೊಂದಿಗೆ ಅಭಿನಂದನೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!