Tuesday, February 25, 2025
Tuesday, February 25, 2025

ಅಮರನಾಥ ಮೇಘಸ್ಪೋಟ- ಉಡುಪಿ ಜಿಲ್ಲೆಯ ಯಾತ್ರಾರ್ಥಿಗಳ ಮಾಹಿತಿಗಾಗಿ ಸಹಾಯವಾಣಿ

ಅಮರನಾಥ ಮೇಘಸ್ಪೋಟ- ಉಡುಪಿ ಜಿಲ್ಲೆಯ ಯಾತ್ರಾರ್ಥಿಗಳ ಮಾಹಿತಿಗಾಗಿ ಸಹಾಯವಾಣಿ

Date:

ಉಡುಪಿ: ಯಾತ್ರ ಸ್ಥಳವಾದ ಅಮರನಾಥ ಕ್ಷೇತ್ರದ ಪ್ರದೇಶದಲ್ಲಿ ಶುಕ್ರವಾರ ಸಂಜೆ 5.30ರ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಇದರಿಂದ ಅಮರನಾಥ ಯಾತ್ರೆ ಮಾರ್ಗದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿ, ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಧಿಡೀರನೇ ಜೋರಾಗಿ ನೀರು ಹರಿದು ಬಂದಿದ್ದರಿಂದ ಯಾತ್ರೆಯ ಮಾರ್ಗದಲ್ಲಿ ಯಾತ್ರಾರ್ಥಿಗಳು ತಂಗಲು ನಿರ್ಮಿಸಿದ್ದ ಟೆಂಟ್ ಗಳು ಪ್ರವಾಹದ ನೀರಿನ ಹೊಡೆತಕ್ಕೆ ಕೊಚ್ಚಿಕೊಂಡು ಹೋಗಿವೆ ಹಾಗೂ ಹಲವು ಯಾತ್ರಾರ್ಥಿಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆಂದು ಸುದ್ದಿ ಇರುತ್ತದೆ. ಮೇಘಸ್ಫೋಟದ ಅನಾಹುತ ಬಳಿಕ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಉಡುಪಿ ಜಿಲ್ಲೆಯಿಂದ ಪವಿತ್ರ ಕ್ಷೇತ್ರವಾದ ಅಮರನಾಥ ಕ್ಷೇತ್ರ ಯಾತ್ರೆ ಕೈಗೊಂಡು, ಮೇಘಸ್ಪೋಟದ ಪ್ರವಾಹಕ್ಕೆ ಸಿಲುಕಿರುವ ಅಥವಾ ಸುರಕ್ಷಿತವಾಗಿರುವ ಯಾತ್ರಾರ್ಥಿಗಳು ಯಾರಾದರೂ ಇದ್ದಲ್ಲಿ ಇವರ ಸಂಬಂಧಿಕರು ಕೂಡಲೇ ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಟೋಲ್ ಫ್ರೀ ಸಂಖ್ಯೆ 1077 (0820-2574802) ಕರೆ ಮಾಡಿ ಸಂಬಂಧಪಟ್ಟ ಯಾತ್ರಾರ್ಥಿಗಳ ವಿವರ / ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!