Saturday, August 29, 2026
Saturday, August 29, 2026

ಶೀಘ್ರದಲ್ಲಿ ಕಡತ ವಿಲೇವಾರಿ: ಜಿಲ್ಲಾಧಿಕಾರಿ

ಶೀಘ್ರದಲ್ಲಿ ಕಡತ ವಿಲೇವಾರಿ: ಜಿಲ್ಲಾಧಿಕಾರಿ

Date:

ಉಡುಪಿ: ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಚೇರಿಗಳ ಕಡತಗಳನ್ನು ಕಾಲಮಿತಿಯಲ್ಲಿ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ, ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಬೋಧಿಸಿ, ನಂತರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾಧಿಕಾರಿ ಕಚೇರಿ, ಎಲ್ಲಾ ತಾಲೂಕು ಕಚೇರಿಗಳು ಹಾಗೂ ಕುಂದಾಪುರ ಉಪ ವಿಭಾಗಾಧಿಕಾರಿ ಕಚೇರಿಗೆ ಸಂಬಂಧಿಸಿದ ಕಡತಗಳನ್ನು ಇ-ಕಚೇರಿ ಮೂಲಕವೇ ತ್ವರಿತವಾಗಿ ವಿಲೇವಾರಿ ಮಾಡುವಂತೆ ಹಾಗೂ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು 2 ತಿಂಗಳ ಒಳಗೆ ಸಂಪೂರ್ಣ ಇ-ಕಚೇರಿ ಮೂಲಕ ಕಡತಗಳನ್ನು ನಿರ್ವಹಣೆ ಮಾಡಬೇಕು.

ಈ ಕುರಿತಂತೆ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಮತ್ತಿತರ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಕಡತಗಳನ್ನು ಸೂಕ್ತ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪೌರಾಯುಕ್ತ ಉದಯ ಶೆಟ್ಟಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!