Home ಸುದ್ಧಿಗಳು ಪ್ರಾದೇಶಿಕ ಉಡುಪಿಯಲ್ಲಿ ರಾಯಣ್ಣನ ವೃತ್ತ ಹೋರಾಟಕ್ಕೆ ಮುತಾಲಿಕ್ ಬೆಂಬಲ

ಉಡುಪಿಯಲ್ಲಿ ರಾಯಣ್ಣನ ವೃತ್ತ ಹೋರಾಟಕ್ಕೆ ಮುತಾಲಿಕ್ ಬೆಂಬಲ

409
0

ಉಡುಪಿ: ಶ್ರೀ ರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಅವರು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲೆಯ ಕಚೇರಿಗೆ ಭೇಟಿ ನೀಡಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಮಾಜ ಸೇವೆಯನ್ನು ಶ್ಲಾಘಿಸಿದರು. ಯಾವ ವೃತ್ತಕ್ಕೆ ಮನವಿ ನೀಡಿ ಹೋರಾಟ ಮಾಡುತ್ತಿದ್ದಾರೋ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಉಪಾಧ್ಯಕ್ಷ ಈರಪ್ಪ ಗೌಂಡಿ, ಲಕ್ಷ್ಮಣ್ ಕೋಲ್ಕಾರ್, ಸಿದ್ದಣ್ಣ ಪೂಜಾರಿ, ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ತಾಲೂಕು ಅಧ್ಯಕ್ಷ ಪ್ರಭಾಕರ್ ಪೂಜಾರಿ, ಶ್ರೀ ರಾಮ ಸೇನೆಯ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು, ವಿಭಾಗ ಅಧ್ಯಕ್ಷ ಮೋಹನ್ ಭಟ್, ಜಿಲ್ಲಾ ವಕ್ತಾರ ಶರತ್ ಮಣಿಪಾಲ್, ಜಿಲ್ಲಾ ಪ್ರಮುಖ್ ಪ್ರಶಾಂತ್ ಭಟ್ ಪೆರಂಪಳ್ಳಿ, ಸಂದೀಪ್ ಮೂಡುಬೆಟ್ಟು, ಉದ್ಯಮಿ ಚಂದ್ರಕಾಂತ್ ಶೆಟ್ಟಿ ಮುಂಬೈ, ಅಕ್ಷಯ ಮೂಡುಬೆಟ್ಟು, ಶ್ರೀರಾಮ ಸೇನೆಯ ಜಿಲ್ಲಾ ಕಾರ್ಯಕರ್ತರು ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.