Monday, February 24, 2025
Monday, February 24, 2025

ಕುಂದಾಪ್ರ ಭಾಷೆಯ ಸೊಗಡು ವಿಶ್ವದೆಲ್ಲೆಡೆ ಪಸರಿಸಲಿ

ಕುಂದಾಪ್ರ ಭಾಷೆಯ ಸೊಗಡು ವಿಶ್ವದೆಲ್ಲೆಡೆ ಪಸರಿಸಲಿ

Date:

ಕೋಟ: ಕುಂದಾಪ್ರ ಭಾಷೆ ಈ ಭಾಗದ ಜನರ ಜೀವನಾಡಿಯಿದ್ದಂತೆ, ಅದನ್ನು ವಿಶ್ವದೆಲ್ಲೆಡೆ ಪಸರಿಸುವಂತಾಗಬೇಕು, ಇಲ್ಲಿನ ಆಚರಣೆ ಸಂಸ್ಕೃತಿ ತನ್ನದೇ ಆದ ಮಹತ್ವವನ್ನು ಹೊಂದಿದ್ದು ಇನ್ನಷ್ಟೂ ಈ ಭಾಷೆ ಸಮೃದ್ಧವಾಗಿ ಬೆಳೆಯಲಿ, ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಕುಂದಾಪ್ರ ಭಾಷೆಯ ವಿವಿಧ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುವುದು ಅಲ್ಲದೇ ಕುಂದಾಪ್ರ ಭಾಷೆ ಅಕಾಡೆಮಿ ಸ್ಥಾಪಿಸಲು ಸರಕಾರವನ್ನು ಒತ್ತಾಯಿಸಲಾಗುವುದೆಂದು ಉಡುಪಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಹೇಳಿದರು.

ಅವರು ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಡಾ. ಕಾರಂತ ಪ್ರತಿಷ್ಠಾನ (ರಿ.) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಆಶ್ರಯದಲ್ಲಿ ಯು ಚಾನೆಲ್ ಸಹಯೋಗದಲ್ಲಿ ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ಕುಂದಾಪ್ರ ಕನ್ನಡ ಉತ್ಸವ ಹಾಡಿಗೆ-ಹನ್ನೆರಡು ಕಬರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಉಡುಪಿ ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿರ್ದೇಶಕಿ ಪೂರ್ಣಿಮ ಮಾತನಾಡಿ ಕುಂದಾಪ್ರ ಭಾಷೆಗೆ ಉಳಿದ ಭಾಷೆಗೆ ಸಿಕ್ಕ ಸ್ಥಾನಮಾನ ದೊರಕುವಂತಾಗಲಿ, ವಿಶ್ವ ಕುಂದಾಪ್ರ ದಿನಾಚರಣೆ ಮೂಲಕ ಇಲ್ಲಿನ ಸಂಸ್ಕೃತಿ ಅನಾವರಣಕ್ಕೆ ಒಂದು ವೇದಿಕೆ ಆಗಿದೆ ಎಂದರು.

ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಬ್ರಹ್ಮಾವರ ತಾಲ್ಲೂಕು ಕ.ಸಾ.ಪ ಅಧ್ಯಕ್ಷ ರಾಮಚಂದ್ರ ಐತಾಳ್, ಸಂಘಟಕ ಪ್ರಸಾದ್ ಬಿಲ್ಲವ, ಚೇಂಪಿ ದಿನೇಶ್ ಆಚಾರ್ಯ, ಮಂಜುನಾಥ ಹಿಲಿಯಾಣ ಉಪಸ್ಥಿತರಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಪ್ರಸ್ತಾಪಿಸಿ, ಸಾಹಿತಿ ಸತೀಶ್ ವಡ್ಡರ್ಸೆ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.24: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!