Monday, February 9, 2026
Monday, February 9, 2026

ತುಳುವಿನಲ್ಲೇ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ಉಡುಪಿ ವಲಯದ ಮಹಾಸಭೆ

ತುಳುವಿನಲ್ಲೇ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ಉಡುಪಿ ವಲಯದ ಮಹಾಸಭೆ

Date:

ಉಡುಪಿ: ತುಳುವಿಗೆ ಸಾಂವಿಧಾನಿಕ ಮಾನ್ಯತೆ ಸಿಗಬೇಕು ಎಂಬ ಆಗ್ರಹ ತುಳುನಾಡಿನಲ್ಲಿ ಹೊಸ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ಉಡುಪಿ ವಲಯದ 29ನೇ ಮಹಾಸಭೆಯ ಕಾರ್ಯಕಲಾಪ ತುಳುವಿನಲ್ಲಿಯೇ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ಎಸ್.ಕೆ.ಪಿ.ಎ ಜಿಲ್ಲಾಧ್ಯಕ್ಷ ಹಾಗೂ ರಾಜ್ ಸೌಂಡ್ ಅಂಡ್ ಲೈಟ್ಸ್ ತುಳು ಚಲನಚಿತ್ರ ನಿರ್ಮಾಪಕ ಆನಂದ್ ಎನ್ ಬಂಟ್ವಾಳ್ ಅಭಿಪ್ರಾಯಪಟ್ಟರು. ಅವರು ಉಡುಪಿಯ ಜಗನ್ನಾಥ ಸಭಾಭವನದಲ್ಲಿ ಉಡುಪಿ ವಲಯದ ಮಹಾಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ವಿದ್ಯಾರ್ಥಿವೇತನ, ವೈದ್ಯಕೀಯ ನೆರವು, ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ, ಗುರುತಿಸುವಿಕೆ, ನೂತನ ಸದಸ್ಯರ ಸೇರ್ಪಡಿಸುವಿಕೆ ಮುಂತಾದ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಜಿಲ್ಲಾ ಕೋಶಾಧಿಕಾರಿ ನವೀನ ರೈ ಪಂಜಳ, ಉಪಾಧ್ಯಕ್ಷ ಪದ್ಮಪ್ರಸಾದ್ ಜೈನ್, ಮಾಜಿ ಜಿಲಾಧ್ಯಕ್ಷ ಕೆ. ವಾಸುದೇವ ರಾವ್, ಜಿಲ್ಲಾ ಕಾರ್ಯದರ್ಶಿ ವಾಮನ ಪಡುಕೆರೆ, ಜಯಕರ ಸುವರ್ಣ, ಪ್ರವೀಣ್ ಹೂಡೆ ಪ್ರಕಾಶ್ ಶೆಟ್ಟಿ, ಅಶೋಕ್ ಪುತ್ರನ್, ಪ್ರವೀಣ್ ಹರಿಖಂಡಿಗೆ, ಎಂ.ಎಸ್ ಮಂಜು ಪರ್ಕಳ, ದಾಮೋದರ್ ಸುವರ್ಣ, ಸತೀಶ್ ಸೇರಿಗಾರ್, ಹರೀಶ್ ಅಲೆವೂರು, ಸಂದೀಪ್ ಕಾಮತ್ ಉಪಸ್ಥಿತರಿದ್ದರು.

ವಲಯಾಧ್ಯಕ್ಷ ಜನಾರ್ದನ ಕೊಡವೂರ್ ಸ್ವಾಗತಿಸಿ, ಕಾರ್ಯದರ್ಶಿ ಪ್ರವೀಣ್ ಕೊರೆಯ ವರದಿ ವಾಚಿಸಿದರು. ದಿವಾಕರ ಹಿರಿಯಡ್ಕ ಲೆಕ್ಕಪತ್ರ ಮಂಡನೆ ಮಾಡಿದರು. ದಿವಾಕರ್ ಕಟೀಲ್ ಪ್ರಾರ್ಥಿಸಿದರು. ಸುರಭಿ ಸುಧೀರ್ ವಂದಿಸಿದರು, ರಾಘವೇಂದ್ರ ಶೇರಿಗಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಡೂರು: ಜನಸಂಪರ್ಕ ಸಭೆ

ಪೆರ್ಡೂರು, ಫೆ.8: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ,...

ಕಾರ್ಕಡ ಗೆಳೆಯರ ಬಳಗ: ಸಾಧಕರಿಗೆ ಸನ್ಮಾನ

ಕೋಟ, ಫೆ.8: ಕಾರ್ಕಡ ಗೆಳೆಯರ ಬಳಗ ಇದರ ೩೮ನೇ ವಾರ್ಷಿಕೋತ್ಸವ, ಪ್ರತಿಭಾ...

ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವುದು ಶಿಕ್ಷಕರ ಜವಾಬ್ದಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.7: ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಬರುವಂತೆ ಮಾಡುವುದರೊಂದಿಗೆ ಅವರು...
error: Content is protected !!