Monday, February 24, 2025
Monday, February 24, 2025

ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ವಿದ್ಯಾರ್ಥಿಗಳಿಂದ ಗದ್ದೆ ನಾಟಿ

ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ವಿದ್ಯಾರ್ಥಿಗಳಿಂದ ಗದ್ದೆ ನಾಟಿ

Date:

ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 7ರಿಂದ 9ನೇ ತರಗತಿಯ ವಿದ್ಯಾರ್ಥಿಗಳು
ಪಠ್ಯಪುಸ್ತಕದಿಂದಾಚೆಗಿನ ಅನುಭವಕ್ಕೆ ಸಾಕ್ಷಿಯಾದರು. ಸಂಸ್ಥೆಯ 7, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳು ಕುಂದಾಪುರದ ಕೋಣಿಯಲ್ಲಿರುವ ಗದ್ದೆಗೆ ಹೋಗಿ, ಬಹಳ ಉತ್ಸಾಹದಿಂದ ಭತ್ತದ ಸಸಿಗಳನ್ನು ನೆಡುವುದರ ಮೂಲಕ ಗದ್ದೆ ನಾಟಿಯ ಸ್ವ ಅನುಭವವನ್ನು ಆನಂದಿಸಿದರು.

ಹೀಗೆ ಭಾರತೀಯರ ಪ್ರಧಾನ ಆಹಾರ ಧಾನ್ಯವಾದ ಭತ್ತ ಬೆಳೆಯುವ ವಿಧಾನ, ಆ ದಿಸೆಯಲ್ಲಿ ರೈತನ ಶ್ರಮ ಮತ್ತು ಅವರ ಮಹತ್ವವನ್ನು ಮನಗಂಡರು. ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್ ಅವರ ಮಾರ್ಗದರ್ಶನ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ ಇವರ ಪ್ರೋತ್ಸಾಹ, ಶಿಕ್ಷಕರಾದ ದಿವ್ಯ ಎನ್., ಕವಿತಾ ಪಿ., ರವಿಚಂದ್ರ, ಪ್ರಕಾಶ್ ಬಿ., ಪವಿತ್ರಾ ಪುತ್ರನ್, ಸರೋಜಾ, ಆಶಾಲತಾ ಮತ್ತು ಪ್ರತಿಮಾ ರವರ ಸಹಯೋಗದೊಂದಿಗೆ ಭತ್ತದ ಗದ್ದೆ ನಾಟಿ ಕಾರ್ಯ ಜರುಗಿತು.

ಈ ವಿಶಿಷ್ಟವಾದ ಚಟುವಟಿಕೆಯನ್ನು ಸಂಸ್ಥೆಯ ಉಪ ಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭ ಕೆ.ಎನ್ ಹಾಗೂ ಪ್ರಾಥಮಿಕ ವಿಭಾಗದ ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್ ಆಯೋಜಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!