Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಇ-ಶ್ರಮ್ ಕಾರ್ಡ್ ವಿತರಣೆ

ಉಡುಪಿ: ಇ-ಶ್ರಮ್ ಕಾರ್ಡ್ ವಿತರಣೆ

423
0

ಉಡುಪಿ: ಉಡುಪಿ ನಗರಸಭೆ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ “ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಸ್ವ ನಿಧಿ) ಯೋಜನೆ” ವಿತರಣೆ ಹಾಗೂ ಕಾರ್ಮಿಕ ಇಲಾಖೆ ಉಡುಪಿ ಜಿಲ್ಲೆ, ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿ, ಬೆಂಗಳೂರು ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಮತ್ತು ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಹಾಗೂ ಇ-ಶ್ರಮ್ ಯೋಜನೆ ನೊಂದಣಿ ಅಭಿಯಾನ ಹಾಗೂ ಮಾಹಿತಿ ಶಿಬಿರ ಇಂದು ಅಜ್ಜರಕಾಡು ಪುರಭವನದಲ್ಲಿ ನಡೆಯಿತು.

ಶಾಸಕರಾದ ಕೆ. ರಘುಪತಿ ಭಟ್ ಅವರು ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಸ್ವ ನಿಧಿ) ಬೀದಿ ಬದಿ ವ್ಯಾಪಾರಿಗಳಿಗೆ ವಿಶೇಷ ಕಿರು ಸಾಲ ಸೌಲಭ್ಯ ಮಂಜೂರಾತಿ ಪತ್ರ ಮತ್ತು ಇ-ಶ್ರಮ್ ಕಾರ್ಡ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ನಗರ ಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಪ್ರಭಾಕರ್ ಪೂಜಾರಿ, ಹರೀಶ್ ಶೆಟ್ಟಿ, ಸವಿತಾ ಹರೀಶ್ ರಾಮ್, ರಜನಿ ಹೆಬ್ಬಾರ್, ಮಾನಸ ಪೈ, ಗಿರಿಧರ್ ಆಚಾರ್ಯ, ಅಶೋಕ್ ನಾಯ್ಕ್ ಹಾಗೂ ಉಡುಪಿ ನಗರಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಕುಮಾರ್, ಲೀಡ್ ಡಿಸ್ಟ್ರಿಕ್ ಚೀಫ್ ಮ್ಯಾನೇಜರ್ ಪಿ. ಎಂ ಪಿಂಜಾರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.