Sunday, September 29, 2024
Sunday, September 29, 2024

ಉಪ್ಪೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ

ಉಪ್ಪೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ

Date:

ಉಪ್ಪೂರು: ಯುವ ವಿಚಾರ ವೇದಿಕೆ (ರಿ.) ಉಪ್ಪೂರು ಕೊಳಲಗಿರಿ, ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ- ಅಮೃತ ಮಹೋತ್ಸವ ಕಾರ್ಯಕ್ರಮ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಿಗೆ ಸಮ್ಮಾನ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಉಪ್ಪೂರು ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಸೇವೆಯಿಂದ ನಿವೃತ್ತಿ ಹೊಂದಿದ ನಾಗರತ್ನ ಟೀಚರ್ ನೆರವೇರಿಸಿದರು. ಅವರಿಗೆ ಯುವ ವಿಚಾರ ವೇದಿಕೆ ವತಿಯಿಂದ ಸಮ್ಮಾನಿಸಲಾಯಿತು. ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಯುವ ವಿಚಾರ ವೇದಿಕೆ ನಡೆಸುವ ಕಾರ್ಯಕ್ರಮಗಳಾದ ಕೃಷಿ, ಗ್ರಾಮೀಣ ಕ್ರೀಡಾಕೂಟ, ಶೈಕ್ಷಣಿಕ ತರಬೇತಿ, ಆರೋಗ್ಯ ಶಿಬಿರ, ಶ್ರಮದಾನಗಳ ಇವುಗಳು ಯುವಜನರಿಗೆ ಪ್ರೇರಣೆ ನೀಡುತ್ತದೆ ಎಂದರು.

ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರಾದ ಅಶ್ವಿನ್ ರೋಚ್, ಯುವ ಉದ್ಯಮಿ ಪೀಟರ್ ಡಿಸೋಜ, ಸಾಮಾಜಿಕ ಕಾರ್ಯಕರ್ತ ರಮೇಶ್ ಕರ್ಕೇರಾ, ವೇದಿಕೆಯ ಹಿರಿಯ ಸದಸ್ಯ ಮಾಧವ ಪಾಣ, ಅಧ್ಯಕ್ಷ ದಿನೇಶ್ ಶೆಟ್ಟಿ ಉಪಸ್ಥಿತರಿದ್ದರು. ವೇದಿಕೆಯ ಸದಸ್ಯರಾದ ಸುಬ್ರಹ್ಮಣ್ಯ ಆಚಾರ್ಯ ಸಮ್ಮಾನಿತರನ್ನು ಪರಿಚಯಯಿಸಿದರು. ವೇದಿಕೆಯ ಸದಸ್ಯ ಸದಾಶಿವ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಶಿಕುಮಾರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!