Friday, September 20, 2024
Friday, September 20, 2024

ಪ್ರಕೃತಿ-ಸಂಸ್ಕೃತಿ ಸಂಬಂಧಕ್ಕೆ ಆಟಿ ಸಂಕೇತ: ಸಂಕಮಾರ್

ಪ್ರಕೃತಿ-ಸಂಸ್ಕೃತಿ ಸಂಬಂಧಕ್ಕೆ ಆಟಿ ಸಂಕೇತ: ಸಂಕಮಾರ್

Date:

ಉಡುಪಿ: ಪ್ರಕೃತಿ ಮತ್ತು ಸಂಸ್ಕೃತಿಯ ನಡುವೆ ಅವಿನಾಭಾವ ಸಂಬಂಧವಿದೆ. ವಾಸ್ತವವಾಗಿ ಪ್ರಕೃತಿಯೇ ಸಂಸ್ಕೃತಿಯ ವಿಚಾರಗಳನ್ನು ನಿರ್ಧರಿಸುತ್ತದೆ. ಇದಕ್ಕೆ ಆಟಿ ಆಚರಣೆ ಮತ್ತು ನಂಬಿಕೆಗಳು ಒಳ್ಳೆಯ ಸಂಕೇತ. ಕರಾವಳಿಯ
ಬೆಟ್ಟ, ಗುಡ್ಡ, ಮಳೆ, ಕೃಷಿ ಸಂಸ್ಕೃತಿ ಆಟಿ ತಿಂಗಳ ನಂಬಿಕೆ ಮತ್ತು ಆಚರಣೆಗಳನ್ನು ನಿರ್ಧರಿಸಿವೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ನಾರಾಯಣ ಗುರು ಅಧ್ಯಯನ ಪೀಠದ ಸಂಯೋಜಕ ಡಾ. ಗಣೇಶ್ ಅಮೀನ್ ಸಂಕಮಾರ್ ಹೇಳಿದರು.

ಅವರು ತುಳುಕೂಟ ಉಡುಪಿ, ಸಿರಿ ತುಳು ಚಾವಡಿ ಹಾಗೂ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಉಡುಪಿ ಇವರ ಆಶ್ರಯದಲ್ಲಿ ನಡೆದ ಆಟಿ ತುಲಿಪು ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಆಷಾಡದಲ್ಲಿ ಪ್ರಕೃತಿ-ಸಂಸ್ಕೃತಿಗಿರುವ ಸಂಬಂಧವನ್ನು ಅವರು ಉದಾಹರಣೆಗಳ ಸಹಿತ ವಿವರಿಸಿದರು.

ತುಳು ಸಿರಿ ಚಾವಡಿಯ ಗೌರವಾಧ್ಯಕ್ಷ ಹಾಗೂ ಖ್ಯಾತ ವಿದ್ವಾಂಸರಾದ ಡಾ. ವೈ.ಎನ್. ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ತುಳು ಅಕಾಡೆಮಿ ಸದಸ್ಯ ಶಶಿಧರ ಶೆಟ್ಟಿ ನಿಟ್ಟೆ, ಕುಡ್ಲ ಟೈಂಸ್ ಪತ್ರಿಕೆಯ ಯಶೋಧ ಕೇಶವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ತುಳು ಸಿರಿ ಚಾವಡಿಯ ಕಾರ್ಯಾಧ್ಯಕ್ಷ ಈಶ್ವರ ಚಿಟ್ಪಾಡಿ ಸ್ವಾಗತಿಸಿ, ಡಾ. ದುಗ್ಗಪ್ಪ ಕಜೆಕಾರ್ ವಂದಿಸಿದರು. ಉಪನ್ಯಾಸಕ ದಯಾನಂದ ಕುಮಾರ್ ಯು ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!