Monday, October 7, 2024
Monday, October 7, 2024

ಆಸ್ಕರ್ ಫೆರ್ನಾಂಡಿಸ್ ಸ್ಮರಣಾರ್ಥ ಗೋಶಾಲೆಗೆ ಮೇವು

ಆಸ್ಕರ್ ಫೆರ್ನಾಂಡಿಸ್ ಸ್ಮರಣಾರ್ಥ ಗೋಶಾಲೆಗೆ ಮೇವು

Date:

ಬ್ರಹ್ಮಾವರ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಗೋವಿಗಾಗಿ ಮೇವು ಅಭಿಯಾನದ ಭಾಗವಾಗಿ ಇಂದು ಸತೀಶ್ ಕಿಣಿ ಬೆಳ್ವೆ ಅಭಿಮಾನಿ ಬಳಗ ಇವರ ನೇತೃತ್ವದಲ್ಲಿ ಮಾಜಿ ಕೇಂದ್ರ ಸಚಿವ ದಿ.ಆಸ್ಕರ್ ಫೆರ್ನಾಂಡೀಸ್ ಅವರ ಸ್ಮರಣಾರ್ಥವಾಗಿ 2 ಲೋಡ್ ಒಣಹುಲ್ಲುನ್ನು ನೀಲಾವರ ಗೋಶಾಲೆಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗೋವಿಗಾಗಿ ಮೇವು ಸ್ಥಾಪಕ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ಹಿರಿಯ ಚೇತನ ದಿ.ಆಸ್ಕರ್ ಫೆರ್ನಾಂಡಿಸ್ ಅವರು ಗೋಪ್ರೇಮಿಯಾಗಿದ್ದು ರಾಜ್ಯಸಭೆಯಲ್ಲಿ ಗೋಮೂತ್ರದ ಪ್ರಾಮುಖ್ಯತೆ ಕುರಿತು ಈ ಹಿಂದೆ ಉಲ್ಲೇಖ ಮಾಡಿದ್ದರು. ಮಹಾನ್ ನಾಯಕರ ಸ್ಮರಣೆಗಾಗಿ ಗೋವಿಗೆ ಮೇವು ನೀಡಿರುವುದು ಮಾದರಿ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ರೋಹಿತ್ ಶೆಟ್ಟಿ, ಸುರೇಶ್ ಶೆಟ್ಟಿ ಬೆಪ್ಡೆ, ದಯಾನಂದ ಪೂಜಾರಿ ಮಡಾಮಕ್ಕಿ, ವಿಶ್ವಾಸ್ ಶೆಟ್ಟಿ ಹಂಜ, ರತ್ನಾಕರ ಶೆಟ್ಟಿ ಮಡಾಮಕ್ಕಿ, ದಿನಕರ ಶೆಟ್ಟಿ ಅಲ್ಬಾಡಿ, ಪ್ರತಾಪ್ ಶೆಟ್ಟಿ ಮಡಾಮಕ್ಜಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

ಉಡುಪಿ, ಅ.7: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ...

ಉಡುಪಿ: ದಿಢೀರ್ ಮಳೆ; ಸಿಡಿಲಾರ್ಭಟ

ಉಡುಪಿ, ಅ.7: ಉಡುಪಿ ಜಿಲ್ಲೆಯ ಹಲವೆಡೆ ಸಂಜೆ ದಿಢೀರನೆ ಸುರಿದ ಗಾಳಿ...

ಸ್ಥಳೀಯರಿಗೆ ತೊಂದರೆಯಾಗದಂತೆ ಹೋಂ ಸ್ಟೇ, ರೆಸಾರ್ಟ್ಗಳು ಕಾರ್ಯನಿರ್ವಹಿಸುವಂತೆ ಸೂಚನೆ

ಉಡುಪಿ, ಅ.7: ಜಿಲ್ಲೆಯ ಕೆಲವು ಹೋಂ ಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಪ್ರವಾಸೋದ್ಯಮ...

ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಜಿಲ್ಲಾಧಿಕಾರಿ

ಉಡುಪಿ, ಅ.7: ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮುಂದಿನ ಪೀಳಿಗೆಗೆ...
error: Content is protected !!