Monday, February 24, 2025
Monday, February 24, 2025

ಆಸ್ಕರ್ ಫೆರ್ನಾಂಡಿಸ್ ಸ್ಮರಣಾರ್ಥ ಗೋಶಾಲೆಗೆ ಮೇವು

ಆಸ್ಕರ್ ಫೆರ್ನಾಂಡಿಸ್ ಸ್ಮರಣಾರ್ಥ ಗೋಶಾಲೆಗೆ ಮೇವು

Date:

ಬ್ರಹ್ಮಾವರ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಗೋವಿಗಾಗಿ ಮೇವು ಅಭಿಯಾನದ ಭಾಗವಾಗಿ ಇಂದು ಸತೀಶ್ ಕಿಣಿ ಬೆಳ್ವೆ ಅಭಿಮಾನಿ ಬಳಗ ಇವರ ನೇತೃತ್ವದಲ್ಲಿ ಮಾಜಿ ಕೇಂದ್ರ ಸಚಿವ ದಿ.ಆಸ್ಕರ್ ಫೆರ್ನಾಂಡೀಸ್ ಅವರ ಸ್ಮರಣಾರ್ಥವಾಗಿ 2 ಲೋಡ್ ಒಣಹುಲ್ಲುನ್ನು ನೀಲಾವರ ಗೋಶಾಲೆಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗೋವಿಗಾಗಿ ಮೇವು ಸ್ಥಾಪಕ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ಹಿರಿಯ ಚೇತನ ದಿ.ಆಸ್ಕರ್ ಫೆರ್ನಾಂಡಿಸ್ ಅವರು ಗೋಪ್ರೇಮಿಯಾಗಿದ್ದು ರಾಜ್ಯಸಭೆಯಲ್ಲಿ ಗೋಮೂತ್ರದ ಪ್ರಾಮುಖ್ಯತೆ ಕುರಿತು ಈ ಹಿಂದೆ ಉಲ್ಲೇಖ ಮಾಡಿದ್ದರು. ಮಹಾನ್ ನಾಯಕರ ಸ್ಮರಣೆಗಾಗಿ ಗೋವಿಗೆ ಮೇವು ನೀಡಿರುವುದು ಮಾದರಿ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ರೋಹಿತ್ ಶೆಟ್ಟಿ, ಸುರೇಶ್ ಶೆಟ್ಟಿ ಬೆಪ್ಡೆ, ದಯಾನಂದ ಪೂಜಾರಿ ಮಡಾಮಕ್ಕಿ, ವಿಶ್ವಾಸ್ ಶೆಟ್ಟಿ ಹಂಜ, ರತ್ನಾಕರ ಶೆಟ್ಟಿ ಮಡಾಮಕ್ಕಿ, ದಿನಕರ ಶೆಟ್ಟಿ ಅಲ್ಬಾಡಿ, ಪ್ರತಾಪ್ ಶೆಟ್ಟಿ ಮಡಾಮಕ್ಜಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!