Sunday, August 30, 2026
Sunday, August 30, 2026

ವೃತ್ತಿ ಕೌಶಲ್ಯಗಳನ್ನು ಮೈಗೂಡಿಸಿಕೊಂಡರೆ ಯಶಸ್ಸಿನ ಹಾದಿ ಸುಗಮ: ಪ್ರೊ. ಪೌಲ್ ಆಕ್ವಿನಾಸ್

ವೃತ್ತಿ ಕೌಶಲ್ಯಗಳನ್ನು ಮೈಗೂಡಿಸಿಕೊಂಡರೆ ಯಶಸ್ಸಿನ ಹಾದಿ ಸುಗಮ: ಪ್ರೊ. ಪೌಲ್ ಆಕ್ವಿನಾಸ್

Date:

ಮಂಗಳೂರು: ರಿಲಯನ್ಸ್ ಫೌಂಡೇಶನ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ತಮ್ಮ ವೃತ್ತಿ ಮತ್ತು ವಯಕ್ತಿಕ ಜೀವನವನ್ನು ರೂಪಿಸಿಕೊಳ್ಳುವದು ಹೇಗೆ ಎಂಬ ವಿಷಯದ ಕುರಿತು ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಪೌಲ್ ಜಿ. ಆಕ್ವಿನಾಸ್ ರವರು, ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯದ ಆಧಾರದ ಮೇಲೆ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು, ಹೊರತು ಬೇರೆಯವರ ಒತ್ತಾಸೆಯ ಮೇರೆಗೆ ಅಲ್ಲ. ಉತ್ತಮ ವೃತ್ತಿ ಕೌಶಲ್ಯಗಳನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಂಡರೆ ಯಶಸ್ಸಿನ ದಾರಿ ಸುಲಭವಾಗುವುದು ಎಂದರು.

ಕಾರ್ಯಕ್ರಮ ಆಯೋಜನೆ ಮಾಡಿದ ರಿಲಯನ್ಸ್ ಫೌಂಡೇಶನ್ ಅಧಿಕಾರಿ ಮಂಜುನಾಥ ಮೊಕಾಶಿ ಮಾತನಾಡುತ್ತಾ, ರಿಲಯನ್ಸ್ ಫೌಂಡೇಶನ್ ಒಂದು ಲಾಭದಾಯಕವಲ್ಲದ ಸಂಸ್ಥೆಯಾಗಿದ್ದು ಕೃಷಿ, ಮೀನುಗಾರಿಕೆ, ಗ್ರಾಮೀಣ ಅಭಿವೃದ್ದಿ, ಆರೋಗ್ಯ, ಶಿಕ್ಷಣ, ವಿಪತ್ತು ನಿರ್ವಹಣೆ ಮುಂತಾದ ಸಾಮಾಜಿಕ ಕಾರ್ಯಗಳನ್ನು ಸ್ವಯಂಪ್ರೇರಿತವಾಗಿ ದೇಶದಾದ್ಯಂತ ಮಾಡುತ್ತಿದೆ ಎಂದು ಹೇಳಿದರು. ರಾಜ್ಯದ ಹಲವಾರು ಕಡೆಗಳಿಂದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ವರ್ಚುವಲ್ ಮಾಧ್ಯಮದ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!