Tuesday, September 8, 2026
Tuesday, September 8, 2026

ನರೇಗಾ ಯೋಜನೆಯಡಿ ಕಾಳು ಮೆಣಸು ನಾಟಿ ಕಾರ್ಯಕ್ಕೆ ಅವಕಾಶ

ನರೇಗಾ ಯೋಜನೆಯಡಿ ಕಾಳು ಮೆಣಸು ನಾಟಿ ಕಾರ್ಯಕ್ಕೆ ಅವಕಾಶ

Date:

ಉಡುಪಿ: ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಹಾಗೂ ಪುನಃಶ್ಚೇತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅಡಿಕೆ ಬೆಳೆ ಪ್ರದೇಶ ವಿಸ್ತರಣೆಯ ಬೇಡಿಕೆ ಹೆಚ್ಚಾಗಿ ಕಂಡುಬರುತ್ತಿರುವುದರಿಂದ, ಅಡಿಕೆ ಬೆಳೆಗೆ ಹೊಂದಿಕೊಂಡಂತೆ ಈಗಾಗಲೇ ಇರುವ 5 ರಿಂದ 6 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ಅಡಿಕೆ ತೋಟಗಳಲ್ಲಿ ಹೆಚ್ಚುವರಿ ಆದಾಯ ಪಡೆಯಲು ಕಾಳುಮೆಣಸು ಬಳ್ಳಿಗಳ ನಾಟಿ ಕಾರ್ಯವನ್ನು ರೈತರು ಕೈಗೊಳ್ಳಲು ಅವಕಾಶವಿದ್ದು, ತೆಂಗಿನ ತೋಟವನ್ನು ಹೊಂದಿರುವ ರೈತರೂ ಸಹ ಕಾಳು ಮೆಣಸು ಬಳ್ಳಿ ನಾಟಿ ಕಾರ್ಯ ಕೈಗೊಳ್ಳಬಹುದಾಗಿರುತ್ತದೆ.

ಅಡಿಕೆಯಲ್ಲಿ ಕಾಳು ಮೆಣಸು ನಾಟಿಗೆ ಸಂಬಂಧಿಸಿದಂತೆ 107 ಮಾನವ ದಿನಗಳಲ್ಲಿ 30,885.20 ರೂ. ಕೂಲಿ ವೆಚ್ಚ, 21,020.40 ರೂ. ಸಾಮಾಗ್ರಿ ವೆಚ್ಚ ಸೇರಿದಂತೆ ಒಟ್ಟು 51,905.60 ರೂ. ಹಾಗೂ ತೆಂಗಿನಲ್ಲಿ ಕಾಳು ಮೆಣಸು ನಾಟಿ ಕಾರ್ಯಕ್ಕೆ 20 ಮಾನವ ದಿನಗಳಲ್ಲಿ 5,859.20 ರೂ. ಕೂಲಿ ವೆಚ್ಚ, 3,984.40 ರೂ ಸಾಮಾಗ್ರಿ ವೆಚ್ಚ ಸೇರಿದಂತೆ ಒಟ್ಟು 9,843.60 ರೂ. ಗಳಲ್ಲಿ ನಾಟಿ ಕಾರ್ಯ ಕೈಗೊಳ್ಳಬಹುದು.

ಪ್ರದೇಶ ವಿಸ್ತರಣೆಗೆ ಅವಶ್ಯವಿರುವ ಕಾಳುಮೆಣಸಿನ ಗಿಡಗಳು ಪ್ರತೀ ಗಿಡಕ್ಕೆ 5.5 ರೂ. ಗಳಿಗೆ ಲಭ್ಯವಿದ್ದು, ಆಸಕ್ತರು ಹತ್ತಿರದ ಗ್ರಾಮ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು ಉಡುಪಿ ದೂ.ಸಂಖ್ಯೆ:0820-2531950, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಉಡುಪಿ ದೂ.ಸಂಖ್ಯೆ: 0820-2522837, ಕುಂದಾಪುರ ದೂ.ಸಂಖ್ಯೆ: 08254-230813 ಹಾಗೂ ಕಾರ್ಕಳ ದೂ.ಸಂಖ್ಯೆ: 08258-230288 ಅನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!