Thursday, April 16, 2026
Thursday, April 16, 2026

ವಿದೇಶಕ್ಕೆ ತೆರಳುವವರಿಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳ ನೇಮಕ

ವಿದೇಶಕ್ಕೆ ತೆರಳುವವರಿಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳ ನೇಮಕ

Date:

ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಅಂತರಾಷ್ಟ್ರ‍ೀಯ ಮಟ್ಟದ ಒಲಂಪಿಕ್ಸ್ ಗಾಗಿ ವಿದೇಶಕ್ಕೆ ತೆರಳುವ ಫಲಾನುಭವಿಗಳಿಗೆ ಲಸಿಕಾಕರಣಕ್ಕಾಗಿ ಅಗತ್ಯವಿರುವ ಅನುಬಂಧ-4 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ, ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಮೊ.ನಂ; 8277734612 ಹಾಗೂ ಈಗಾಗಲೇ ಮೊದಲನೇ ಡೋಸ್ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್‌ಪೋರ್ಟ್ ನಂಬರನ್ನು ಬಳಸದೇ ಲಸಿಕೆ ಪಡೆದಿದ್ದರೆ ಅಂತಹ ಫಲಾನುಭವಿಗಳಿಗೆ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕಾಕರಣಕ್ಕಾಗಿ ಅನುಬಂಧ-5 ರಲ್ಲಿ ಲಸಿಕಾ ಪ್ರಮಾಣ ಪತ್ರ ನೀಡಲು ದೃಢೀಕರಿಸುವ ಅಧಿಕಾರಿಯಾಗಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪ ನಿರ್ದೇಶಕರಾದ ರವೀಂದ್ರ ಮೊ.ನಂ; 8660523556 ಇವರನ್ನು, ನಗರದ ಡಾ. ಬಿ.ಆರ್. ಶೆಟ್ಟಿ- ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಿಯವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏ.15: ಆದಿಚುಂಚನಗಿರಿ ಮಠದ ಕಾರ್ಯಕ್ರಮದ ನಿಮಿತ್ತ ಬುಧವಾರ ಬೆಳಿಗ್ಗೆ ಬೆಂಗಳೂರಿಗೆ...

ರಾಯ್ಪುರ: ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ

ರಾಯ್ಪುರ, ಏ.15: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವೇದಾಂತ ಲಿಮಿಟೆಡ್ ಉಷ್ಣ ವಿದ್ಯುತ್...

ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

ಕೋಟ, ಏ.15: ಕೋಟ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್...
error: Content is protected !!