Monday, February 24, 2025
Monday, February 24, 2025

ಬಿ.ಆರ್.ಎಸ್ ಆಸ್ಪತ್ರೆ ನೌಕರರ ವಜಾ-ದ.ಸಂ.ಸ. ಖಂಡನೆ; ಮರುನೇಮಕಕ್ಕೆ ಒತ್ತಾಯ

ಬಿ.ಆರ್.ಎಸ್ ಆಸ್ಪತ್ರೆ ನೌಕರರ ವಜಾ-ದ.ಸಂ.ಸ. ಖಂಡನೆ; ಮರುನೇಮಕಕ್ಕೆ ಒತ್ತಾಯ

Date:

ಉಡುಪಿ: ಬಿ.ಆರ್.ಶೆಟ್ಟಿ ಆಸ್ಪತ್ರೆಯ ನೌಕರರನ್ನು ವಜಾಗೊಳಿಸಿದ ಕ್ರಮವನ್ನು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ತೀವ್ರವಾಗಿ ಖಂಡಿಸಿದ್ದು, ಆಸ್ಪತ್ರೆಯ ಆಡಳಿತ ಮಂಡಳಿ ತಕ್ಷಣವೇ ವಜಾಗೊಳಿಸಿದ ನೌಕರರನ್ನು ವಾವಾಸು ನೌಕರಿಗೆ ಸೇರಿಸಿಕೊಂಡು ಬಾಕಿ ವೇತನವನ್ನು ಪಾವತಿಸಬೇಕು. ಜಿಲ್ಲಾಧಿಕಾರಿಯವರು ಈ ಕೂಡಲೇ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಸಂಚಾಲಕರಾದ ಸುಂದರ ಮಾಸ್ತರ್ ಒತ್ತಾಯಿಸಿದ್ದಾರೆ. ಸಂತ್ರಸ್ತ ನೌಕರರನ್ನು ಸ್ಥಳದಲ್ಲಿ ಭೇಟಿಯಾಗಿ ಧೈರ್ಯ ತುಂಬಿ ಮನವಿ ಸ್ವೀಕರಿಸಿದ ಸುಂದರ ಮಾಸ್ತರ್, ಬಳಿಕ ಜಿಲ್ಲಾಧಿಕಾರಿಯವರ ಬಳಿ ಫೋನಿನಲ್ಲಿ ಸಮಾಲೋಚನೆ ನಡೆಸಿ ಸೂಕ್ತ ನ್ಯಾಯ ಒದಗಿಸಲು ಒತ್ತಾಯಿಸಿದರು.

ಈ ಕೂಡಲೇ ವಜಾಗೊಂಡ ಬಿ.ಆರ್‌.ಶೆಟ್ಟಿ ಆಸ್ಪತ್ರೆಯ ನೌಕರರಿಗೆ ಸೂಕ್ತ ನ್ಯಾಯ ಒದಗಿಸಿದೇ ಇದ್ದರೆ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹೋರಾಟದ ಹಾದಿ ಹಿಡಿದು ಪ್ರತಿಭಟನೆಗೆ ಇಳಿಯಬೇಕಾದೀತು ಎಂದು ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಪರಮೇಶ್ವರ ಉಪ್ಪೂರು, ಭಾಸ್ಕರ್ ಮಾಸ್ಟರ್ ಕುಂಜಿಬೆಟ್ಟು, ಮಂಜುನಾಥ ಬಾಳ್ಕುದ್ರು, ಶ್ಯಾಮಸುಂದರ ತೆಕ್ಕಟ್ಟೆ, ಶ್ರೀಧರ, ಅಣ್ಣಪ್ಪ ನಕ್ರೆ, ತಾಲೂಕು ಸಂಚಾಲಕರಾದ ಶಂಕರ್ ದಾಸ್ ಚೆಂಡ್ಕಳ, ವಿಠಲ ಉಚ್ಚಿಲ, ಶ್ರೀನಿವಾಸ ವಡ್ಡರ್ಸೆ, ದೇವು ಹೆಬ್ರಿ, ನಾಗರಾಜ ಕುಂದಾಪುರ, ರಾಘವ ಕುಕ್ಕುಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!