Sunday, May 31, 2026
Sunday, May 31, 2026

ಸಂದಿಗ್ಧ ಪರಿಸ್ಥಿತಿಯಲ್ಲಿ ಆಶಾ ಕಾರ್ಯಕರ್ತರ ಶ್ಲಾಘನೀಯ ಕಾರ್ಯ: ರಮೇಶ್ ಕಾಂಚನ್

ಸಂದಿಗ್ಧ ಪರಿಸ್ಥಿತಿಯಲ್ಲಿ ಆಶಾ ಕಾರ್ಯಕರ್ತರ ಶ್ಲಾಘನೀಯ ಕಾರ್ಯ: ರಮೇಶ್ ಕಾಂಚನ್

Date:

ಬನ್ನಂಜೆಯ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲಿನ ಸಿಬ್ಬಂದಿಗಳಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ನಗರಸಭಾ ಸದಸ್ಯ ಮತ್ತು ಪ್ರತಿಪಕ್ಷ ನಾಯಕರಾದ ರಮೇಶ್ ಕಾಂಚನ್ ಹಾಗೂ ಉದ್ಯಮಿಗಳಾದ ಮುರಳಿ ಶೆಟ್ಟಿ, ಗಣೇಶ್ ದೇವಾಡಿಗ, ಗಣೇಶ್ ನೆರ್ಗಿ, ರಮೇಶ್ ಪಾಲ್, ರಿಕಿತ್‌ ಇವರ ಸಹಕಾರದೊಂದಿಗೆ ಫೇಸ್ ಶೀಲ್ಡ್, ಮಾಸ್ಕ್‌ ಮತ್ತು ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು.

ರಮೇಶ್ ಕಾಂಚನ್ ಅವರು ಮಾತನಾಡಿ, ಇಂಥಹ ಸಂಕಷ್ಟದ ಕಾಲದಲ್ಲಿ ಕೊರೋನಾ ವಾರಿಯರ್ಸ್ ಆಗಿ ಕೆಲಸ ಮಾಡುವ ಆಶಾ ಕಾರ್ಯಕರ್ತರ ಸೇವೆ ಶ್ಲಾಘನೀಯ. ತಮ್ಮ ಜೀವದ ಹಂಗು ತೊರೆದು ಕೊರೋನಾ ಮಹಾಮಾರಿಯ ಬಗ್ಗೆ ಜನಜಾಗೃತಿ ಮೂಡಿಸುವ ಜತೆಗೆ ಸೋಂಕಿತರಲ್ಲಿ ಧೈರ್ಯ ತುಂಬುತ್ತಿರುವ ತಮ್ಮ ಸೇವೆ ಅಭಿನಂದನೀಯ. ಇಂಥಹ ಕಷ್ಟದ ಸಮಯದಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತರಿಗೆ ಕ್ಲಪ್ತ ಸಮಯದಲ್ಲಿ ವೇತನವನ್ನು ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಕೇಂದ್ರದ ವೈದ್ಯಾಧಿಕಾರಿ ಡಾ ಹೇಮಂತ್, ಲ್ಯಾಬ್ ಟೆಕ್ನಿಷಿಯನ್ ರಮೇಶ್ ನಾಯ್ಕ್, ಕಛೇರಿ ಸಹಾಯಕಿ ಪ್ರಮೀಳಾ, ರಘುರಾಮ್ ಭಟ್, ಸಂಜಯ್ ಆಚಾರ್ಯ, ಆಶಾ ಸುಗಮಕಾರರಾದ ಹಿಮಾ ವರ್ಗಿಸ್, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನಾಂಗ್‌ನಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಭಾರತ-ನೇಪಾಳ ಭೂಮಿಪೂಜೆ

ಯು.ಬಿ.ಎನ್.ಡಿ., ಮೇ 31: ನೇಪಾಳದ ಗಂಡಕಿ ಪ್ರಾಂತ್ಯದ ಮನಾಂಗ್ ಜಿಲ್ಲೆಯ ನಸೋನ್...

ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ

ಉಡುಪಿ, ಮೇ 31: ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಜೆ.ಎಮ್.ಎಫ್.ಸಿ ನ್ಯಾಯಧೀಶರಾಗಿ...

ರಾಜೇಂದ್ರ ಪೂಜಾರಿ ಅವರಿಗೆ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ

ಉಡುಪಿ, ಮೇ 31: ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ...
error: Content is protected !!