Tuesday, February 25, 2025
Tuesday, February 25, 2025

ಮುಳ್ಳುಹಂದಿ ಸಂಚಾರ, ಕಾರ್ಯಾಚರಣೆ

ಮುಳ್ಳುಹಂದಿ ಸಂಚಾರ, ಕಾರ್ಯಾಚರಣೆ

Date:

ಉಡುಪಿ: ಚಂದು ಮೈದಾನ ಇಲ್ಲಿಯ ಜನವಸತಿ ಪರಿಸರದ ರಸ್ತೆಗಳಲ್ಲಿ ರಾತ್ರಿಯ ಸಮಯ ಮುಳ್ಳು ಹಂದಿಗಳ ಸಂಚಾರ ಇರುವುದನ್ನು ಸ್ಥಳೀಯರು ಗಮನಿಸಿದ್ದರು. ರಾತ್ರಿಯ ಸಮಯ ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸಲು ಆತಂಕ ಎದುರಿಸುತ್ತಿದ್ದರು. ಈ ಬಗ್ಗೆ ಪತ್ರಕರ್ತ ಸಂತೋಷ್ ಸರಳಬೆಟ್ಟು ಅವರು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಹಾಯವಾಣಿಗೆ ಮಾಹಿತಿ ನೀಡಿದ್ದರು.

ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮುಳ್ಳು ಹಂದಿಯ ಸಂಚರಿಸುವುದು ಕಂಡುಬಂದಿದೆ. ಸಂಚಾರ ಸ್ಥಳ ಗುರುತಿಸಿ, ಅರಣ್ಯ ಇಲಾಖೆ ಮತ್ತು ನಾಗರಿಕ ಸಮಿತಿಯ ಕಾರ್ಯಕರ್ತರು ಮುಳ್ಳು ಹಂದಿಯ ವಶಕ್ಕೆ ಪಡೆಯಲು, ಬೆಳಕಿನ ವ್ಯವಸ್ಥೆಯೊಂದಿಗೆ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಸುರೇಶ್ ಜಿ, ಅರಣ್ಯ ರಕ್ಷಕ ದೇವರಾಜ್ ಪಾಣ, ಸಿಬ್ಬಂದಿ ಜೋಯ್, ಹಾಗೂ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಭಾಗಿಯಾಗಿದ್ದರು.

ಗಾಢವಾದ ಕತ್ತಲು, ಮತ್ತು ಪೊದೆಗಳು ಬೆಳೆದಿರುವುದರಿಂದ ಕಾರ್ಯಾಚರಣೆಗೆ ಅಡಚಣೆ ಎದುರಾಯಿತು. ಮುಳ್ಳು ಹಂದಿ ಪೊದೆಗಳಲ್ಲಿ ಅವಿತುಕೊಂಡು ಕಾರ್ಯಾಚರಣೆ ವಿಫಲಗೊಳಿಸಿತು. ಕಾನನ ಪ್ರದೇಶದಲ್ಲಿ ಜೀವಿಸಬೇಕಾಗಿದ್ದ ವನ್ಯಜೀವಿಗಳು, ಆಹಾರದ ಕೊರತೆಯಿಂದಾಗಿ ಜನವಸತಿ ಪ್ರದೇಶಗಳಲ್ಲಿ ನೆಲೆ ಬಯಸಿವೆ. ಈ ಪ್ರದೇಶದಲ್ಲಿ ಹೆಬ್ಬಾವು, ಮುಳ್ಳು ಹಂದಿಗಳು ಗೋಚರಿಸುತ್ತಲೇ ಇರುತ್ತವೆ ಎಂದು ಸ್ಥಳೀಯರು ಹೇಳಿಕೊಂಡರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!