Friday, September 20, 2024
Friday, September 20, 2024

ಉಡುಪಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ ಆತ್ಮಹತ್ಯೆ ಪ್ರಕರಣ; ಅರಿವು ಮೂಡಿಸುವುದು ಅಗತ್ಯ

ಉಡುಪಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ ಆತ್ಮಹತ್ಯೆ ಪ್ರಕರಣ; ಅರಿವು ಮೂಡಿಸುವುದು ಅಗತ್ಯ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ಬಹಳವಾಗಿ ಕಂಡುಬರುತ್ತಿದೆ. ಖಿನ್ನತೆ, ಸಾಲಬಾಧೆ, ಕುಟುಂಬ ಕಲಹ, ಪ್ರೇಮ ವೈಫಲ್ಯ, ನಿರುದ್ಯೋಗ ಸಮಸ್ಯೆ, ಜೀವನದಲ್ಲಿ ಜಿಗುಪ್ಸೆ, ಅಸಹಾಯಕತೆ ಮೊದಲಾದ ಕಾರಣಗಳಿಂದ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುವುದು ಕಂಡುಬರುತ್ತಿದೆ.

ಜಿಲ್ಲೆಯ ಎಲ್ಲಾ ಪೋಲಿಸ್ ಠಾಣೆಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿರುವುದು ಕಂಡುಬರುತ್ತಿದೆ. ಆತ್ಮಹತ್ಯೆ ಪ್ರಕರಣಗಳಲ್ಲಿ ಹದಿ ಹರೆಯದವರು, ನಡು ವಯಸ್ಸಿನವರು, ಹಿರಿಯ ನಾಗರಿಕರು, ವಿದ್ಯಾವಂತರು, ಅಧಿಕಾರಿ ವರ್ಗದವರು ಇರುವುದು ಕಂಡುಬರುತ್ತಿದೆ. ದಿನ ದಿನವು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡಾಗ ಉಡುಪಿ ಜಿಲ್ಲೆ ಆತ್ಮಹತ್ಯೆ ಮಾಡುಕೊಳ್ಳುವವರ ಜಿಲ್ಲೆ ಆಗುತ್ತದೆಯೇ ಎಂಬ ಆತಂಕವು ಸಾರ್ವಜನಿಕ ವಲಯದಲ್ಲಿ ಎದ್ದಿದೆ.

ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ಪೋಲಿಸ್ ಠಾಣೆಗಳಿಂದ ವಾರ್ಷಿಕ ಆತ್ಮಹತ್ಯೆ ಪ್ರಕರಣಗಳ ವರದಿ ಪಡೆದರೆ, ಆತಂಕದ ವಿಚಾರ ತಿಳಿಯಬಹುದು. ಈ ಬಗ್ಗೆ ಜಿಲ್ಲಾಡಳಿತ- ಪೋಲಿಸ್ ಇಲಾಖೆಯು ತಜ್ಞ ಮನೋವೈದ್ಯರ ನೆರವು ಪಡೆದು, ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟುವ ನೆಲೆಯಲ್ಲಿ ಜಾಗ್ರತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗಿದೆ. ಈ ಬಗ್ಗೆ ಉಡುಪಿ ಜಿಲ್ಲೆಯಲ್ಲಿ ಘಟಿಸುತ್ತಿರುವ ಆತ್ಮಹತ್ಯೆ ಪ್ರಕರಣಗಳ ಕಂಡು ಆತಂಕ ವ್ಯಕ್ತಪಡಿಸಿರುವ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಸಲಹೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!