Friday, July 24, 2026
Friday, July 24, 2026

ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದ ಖಾಸಗಿ ಬಸ್ ಮುಟ್ಟುಗೋಲು

ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದ ಖಾಸಗಿ ಬಸ್ ಮುಟ್ಟುಗೋಲು

Date:

ರಾಜ್ಯ ಸಾರಿಗೆ ಆಯುಕ್ತರ ಆದೇಶ ಹಾಗೂ ಮೋಟಾರು ವಾಹನ ಕಾಯ್ದೆಯನ್ವಯ ಜಿಲ್ಲೆಯ ಎಲ್ಲಾ ಖಾಸಗಿ ಬಸ್ಸು, ಮ್ಯಾಕ್ಸಿಕ್ಯಾಬ್ ಹಾಗೂ ಟ್ಯಾಕ್ಸಿಗಳು ಮುಂಗಡ ತೆರಿಗೆ ಪಾವತಿಸಿ, ಅನುಪಯುಕ್ತತೆಯಿಂದ ಬಿಡುಗಡೆಗೊಳಿಸಿಕೊಂಡು ಮಾತ್ರ ವಾಹನವನ್ನು ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಆದೇಶಿಸಿರುತ್ತಾರೆ.

ಆದರೆ ಸೋಮವಾರದಂದು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಚೇರಿಯ ಮೋಟಾರು ವಾಹನ ನಿರೀಕ್ಷಕರು, ನಿಯಮ ಉಲ್ಲಂಘಿಸಿ ವಾಹನ ತೆರಿಗೆ ಪಾವತಿಸದೇ, ಅದ್ಯರ್ಪಣಯಿಂದ ಬಿಡುಗಡೆಗೊಳಿಸಿಕೊಳ್ಳದೇ ಖಾಸಗಿ ಕಂಪೆನಿಯ ನೌಕರರನ್ನು ಸಾರ್ವಜನಿಕ ರಸ್ತೆಯ ಮೇಲೆ ಕೊಂಡೊಯ್ಯುತ್ತಿದ್ದ ಉಡುಪಿಯಿಂದ ಹೆಬ್ರಿ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು (ಕೆಎ-51/ ಬಿ 9646) ತಪಾಸಣೆ ನಡೆಸಿ, ವಾಹನವನ್ನು ಮುಟ್ಟುಗೋಲು ಹಾಕಿ, ಕಾನೂನು ರೀತಿಯ ಕ್ರಮ ಕೈಗೊಂಡು, ಮುಂದಿನ ಕ್ರಮಕ್ಕಾಗಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಒಪ್ಪಿಸಿರುತ್ತಾರೆ.

ಆದ್ದರಿಂದ ಅನಾವಶ್ಯಕವಾಗಿ ಸಾರ್ವಜನಿಕರಿಗೆ ತೊಂದರೆ ನೀಡದೇ, ಮುಂಗಡ ವಾಹನ ತೆರಿಗೆ ಪಾವತಿಯೊಂದಿಗೆ ಅದ್ಯರ್ಪಣದಿಂದ ಬಿಡುಗಡೆಗೊಳಿಸಿದ ನಂತರ ಮಾತ್ರ ವಾಹನವನ್ನು ಸಾರ್ವಜನಿಕ ರಸ್ತೆಯಲ್ಲಿ ಓಡಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಜೆ.ಪಿ ಗಂಗಾಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!