Monday, February 24, 2025
Monday, February 24, 2025

ಭಾವೈಕ್ಯತೆ, ಸೌಹಾರ್ದತೆಯಿಂದ ಸಮಸ್ಯೆಗಳ ಪರಿಹಾರ ಸಾಧ್ಯ : ಗೋಪಾಲಕೃಷ್ಣ ಗಾಂವ್ಕರ್

ಭಾವೈಕ್ಯತೆ, ಸೌಹಾರ್ದತೆಯಿಂದ ಸಮಸ್ಯೆಗಳ ಪರಿಹಾರ ಸಾಧ್ಯ : ಗೋಪಾಲಕೃಷ್ಣ ಗಾಂವ್ಕರ್

Date:

ಮಲ್ಪೆ: ಪ್ರಸ್ತುತ ಜಾಗತಿಕವಾಗಿ ಕಂಡುಬರುವ ಹಿಂಸಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರ‍ೀಯ ಭಾವೈಕ್ಯತೆ ಹಾಗೂ ಕೋಮು ಸೌಹಾರ್ದತೆಯ ಪರಿಕಲ್ಪನೆ ಅಗತ್ಯವಾಗಿದೆ. ತಾನು ಚನ್ನಾಗಿ ಬದುಕಿ ಇತರರನ್ನೂ ಬದುಕಲು ಅವಕಾಶ ನೀಡುವ ಮನಸ್ಥಿತಿ ಬೆಳೆದಾಗ ಮಾತ್ರ ಉತ್ತಮ ಬದುಕುವ ವಾತಾವರಣ ನಿರ್ಮಾಣವಾಗಲು ಸಾಧ್ಯ. ಸಂವಿಧಾನದ ಅಶಯವಾದ ಶಾಂತಿ, ಸಹಬಾಳ್ವೆ ಹಾಗೂ ಸಮಾನತೆಯ ಚಿಂತನೆಗಳು ಇಂದಿನ ಯುವ ಸಮುದಾಯದಲ್ಲಿ ಬೆಳೆದಾಗ ಭವ್ಯ ಭಾರತದ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿ ರಾಷ್ಟ್ರ‍ೀಯ ಸೇವಾ ಯೋಜನೆ, ಯೂತ್‌ ರೆಡ್‌ ಕ್ರಾಸ್ ಹಾಗೂ ಸ್ಕೌಟ್ & ಗೈಡ್ಸ್ ಆಯೋಜಿಸಿದ್ದ ಸದ್ಭಾವನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು, ದೇಶದ ಏಕತೆ ಹಾಗೂ ಸಮಗ್ರತೆಗೆ ನಾಗರಿಕರ ಸೂಕ್ತ ನಡವಳಿಕೆ ಅಗತ್ಯ. ಭ್ರಾತೃತ್ವದ ಚಿಂತನೆಯು ಹಲವು ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಬಲ್ಲದು. ನನಗಿಂತ ದೇಶ ಹಿರಿದು ಎಂಬ ಧ್ಯೇಯದೊಂದಿಗೆ ಉತ್ತಮ ನಾಗರಿಕರಾದಾಗ ಸದ್ಭಾವನಾ ದಿನಾಚರಣೆಯ ನಿಜವಾದ ಉದ್ಧೇಶ ಸಾಕಾರವಾಗುತ್ತದೆ ಎಂದರು.

ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ. ಉಪಸ್ಥಿತರಿದ್ದರು. ಯೂತ್‌ ರೆಡ್ ಕ್ರಾಸ್‌ನ ಸಂಚಾಲಕ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಉದಯ ಶೆಟ್ಟಿ ಕೆ. ಸ್ವಾಗತಿಸಿ ರಾಷ್ಟ್ರ‍ೀಯ ಸೇವಾ ಯೋಜನಾಧಿಕಾರಿ ದಯಾನಂದ ಕುಮಾರ್ ವಂದಿಸಿದರು. ಅಶ್ವಿಜಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾಥಿಗಳಿಗೆ ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!