Tuesday, February 25, 2025
Tuesday, February 25, 2025

ಸಹಕಾರ ಭಾರತಿ ಸ್ಥಾಪನಾ ದಿನಾಚರಣೆ

ಸಹಕಾರ ಭಾರತಿ ಸ್ಥಾಪನಾ ದಿನಾಚರಣೆ

Date:

ಬೈಂದೂರು: ಸಹಕಾರ ಭಾರತಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಬೈಂದೂರು ನಾಗೂರಿನ ಲಲಿತಾಕೃಷ್ಣ ಸಭಾಭವನದಲ್ಲಿ ನಡೆಯಿತು.

ಸಹಕಾರ ಭಾರತಿ ಉಡುಪಿ ಜಿಲ್ಲಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸಹಕಾರ ಭಾರತಿಯ ಸಮಾಜದ ಉನ್ನತಿಗೆ ಶ್ರಮಿಸುತ್ತಿದೆ. ಸಹಕಾರ ಭಾರತಿ ಸಂಘಟನಾತ್ಮಕವಾಗಿ ಕೆಲಸ ಮಾಡುವುದರ ಮೂಲಕ ಎಲ್ಲಾ ಸಹಕಾರಿ ಸಂಘಗಳಲ್ಲಿ ಸಹಕಾರ ಭಾರತಿ ಭಾಗವಹಿಸುವಂತಾಗಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾದ ಕರ್ನಾಟಕ ಪೂರ್ಣವಾದಿ ಕಾರ್ಯದರ್ಶಿ ಮಂಜುನಾಥ್ ಇವರು ಮಾತನಾಡಿ, ಸಹಕಾರ ಭಾರತಿ ಜಿಲ್ಲಾ ಸಮಾವೇಶವನ್ನು ಮಾಡುವ ಬಗ್ಗೆ ಎಲ್ಲಾ ಪ್ರಕೋಷ್ಠಗಳ ಪ್ರತಿನಿಧಿಗಳು ಹಾಗೂ ತಾಲೂಕಿನಲ್ಲಿ ಸದಸ್ಯತ್ವ ಮಾಡುವುದರ ಮೂಲಕ ಸಂಘಟಿತರಾಗಬೇಕು ಎಂದರು.

ಸಾಹಿತಿ ಸಹಕಾರಿ ಧುರೀಣರಾದ ಕೆ. ಪುಂಡಲೀಕ್ ನಾಯಕ್ ರನ್ನು ಸನ್ಮಾನಿಸಲಾಯಿತು. ಸಹಕಾರ ಭಾರತಿ ಬೈಂದೂರು ಅಧ್ಯಕ್ಷ ಅಶೋಕ್ ವಿ ಆಚಾರ್ಯ ಸಭಾಧ್ಯಕ್ಷತೆಯನ್ನು ವಹಿಸಿದರು.

ಮಂಗಳೂರು ವಿಭಾಗ ಪ್ರಮುಖ್ ಮೋಹನ್ ಕುಂಬ್ಳೆಕರ್, ಜಿಲ್ಲಾ ಮಹಿಳಾ ಪ್ರಕೋಷ್ಠದ ಪ್ರಮುಖರಾದ ವಿಜೇತ ಪೈ, ಜಿಲ್ಲಾ ಫಾಕ್ಸ್ ಪ್ರಕೋಷ್ಟದ ಪ್ರಮುಖರಾದ ಪ್ರಸಾದ್ ಶೆಟ್ಟಿ, ಮಂಜು ದೇವಾಡಿಗ ಬಿಜೂರ್, ವೆಂಕಟೇಶ್ ಹೆಬ್ಬಾರ್ ನಾಯ್ಕನಕಟ್ಟೆ, ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ತಾಲೂಕು ಉಪಾಧ್ಯಕ್ಷ ಆನಂದ್ ಖಾರ್ವಿ ಸ್ವಾಗತಿಸಿ, ತಾ. ಉಪಾಧ್ಯಕ್ಷ ರಮೇಶ್ ಪೈ ವಂದಿಸಿದರು. ಕಾರ್ಯದರ್ಶಿ ಉಮೇಶ್ ಬಿಜೂರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!