ಉಡುಪಿ: ಉಡುಪಿ ತಾಲೂಕು ಸಹಕಾರ ಭಾರತಿಯ ಆಶ್ರಯದಲ್ಲಿ ಸಹಕಾರ ಭಾರತಿ ಸ್ಥಾಪನಾ ದಿನಾಚರಣೆಯು ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರಾದ ದಿನೇಶ್ ಹೆಗ್ಡೆ ಆತ್ರಾಡಿ ವಹಿಸಿದ್ದರು. ಸಹಕಾರ ಭಾರತಿ ಸ್ಥಾಪನಾ ದಿನದ ವಿಶೇಷತೆಯ ಬಗ್ಗೆ ಮಂಗಳೂರು ವಿಭಾಗ ಪ್ರಮುಖ್ ಮೋಹನ್ ಕುಂಬ್ಳೆಕರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಪ್ರಕೋಷ್ಠದ ಸಂಚಾಲಕರಾದ ವಿಜೇತ ವಿದ್ಯಾ ಪೈ, ಇಂಡಸ್ಟ್ರಿಯಲ್ ಕೋ – ಅರೇಟಿವ್ ಸೊಸೈಟಿ ಉಡುಪಿ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹೆಗ್ದೆ, ಜಿಲ್ಲಾ ಉಪಾಧ್ಯಕ್ಷ ಜಯಪ್ರಕಾಶ್ ಕೆದ್ಲಾಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಪತ್ರವನ್ನು ಮಂಜುನಾಥ್ ಮಣಿಪಾಲ್ ವಾಚಿಸಿದರು. ಪ್ರದೀಪ್ ನಾಯಕ್ ವಂದನಾರ್ಪಣೆಗೈದರು. ಸಂಘಟನಾ ಕಾರ್ಯದರ್ಶಿ ಡಾ. ಬಾಲಕೃಷ್ಣ ಮದ್ದೊಡಿ ಕಾರ್ಯಕ್ರಮ ನಿರೂಪಿಸಿದರು.




By
ForthFocus™