Monday, February 24, 2025
Monday, February 24, 2025

ಯುವ ಜಾದೂಗಾರ ಪ್ರಥಮ್ ಕಾಮತ್ ಗೆ ‘ಸಂಗಮ ರತ್ನ’ ರಾಷ್ಟ್ರ‍ೀಯ ಪ್ರಶಸ್ತಿ

ಯುವ ಜಾದೂಗಾರ ಪ್ರಥಮ್ ಕಾಮತ್ ಗೆ ‘ಸಂಗಮ ರತ್ನ’ ರಾಷ್ಟ್ರ‍ೀಯ ಪ್ರಶಸ್ತಿ

Date:

ಉಡುಪಿ: ಶಾಸಕರ ಜನಸ್ಪಂದನ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ಹಾಗೂ ಭಗವಾನ್ ಬುದ್ಧ, ಬಸವೇಶ್ವರ, ಅಂಬೇಡ್ಕರ್, ಡಾ. ಶಿವಕುಮಾರ ಸ್ವಾಮೀಜಿ ಜಯಂತಿ ಹಾಗೂ ಸಂಗಮ ಸಮಾವೇಶ ಸಮಾರಂಭದಲ್ಲಿ ಸಂಗಮ ರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಕಟಪಾಡಿಯ ಬಹುಮುಖ ಪ್ರತಿಭೆ, ಯುವ ಜಾದುಗಾರ ಪ್ರಥಮ್ ಕಾಮತ್ ಇವರು ಪಡೆದಿರುತ್ತಾರೆ.

ಭಾನುವಾರ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಪ್ರಥಮ್ ಕಾಮತ್ ಗೆ ಸಂಗಮ ರತ್ನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಡಾ. ಆರೂಢ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಡಾ. ಸುಭಾಷ್ ಭರಣಿ, ಬಿ. ಆರ್. ಹೀರೆಮಟ, ಡಾ. ಹೆಚ್. ಸದಾಶಿವ, ಡಾ. ಚಿಕ್ಕಾಹೆಜ್ಜಾಜಿ ಮಹದೇವ್, ಯೋಗಾನಂದ ಗೌಡ, ಉಮಾನಾಥ ಶೆಣೈ ಮುಂತಾದವರು ಉಪಸ್ಥಿತರಿದ್ದರು.

ಕಟಪಾಡಿಯ ರಂಗ ನಟ ನಾಗೇಶ್ ಕಾಮತ್ ಮತ್ತು ಸುಜಾತ ಕಾಮತ್ ದಂಪತಿಗಳ ಪುತ್ರನಾದ ಪ್ರಥಮ್ ಕಾಮತ್ ಅವರು ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 95 ಅಂಕಗಳನ್ನು ಪಡೆದಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!