Sunday, July 26, 2026
Sunday, July 26, 2026

ಸಾಣೂರು: ವಿಶ್ವ ಯುವ ಕೌಶಲ್ಯ ದಿನಾಚರಣೆ ಮಾಹಿತಿ ಕಾರ್ಯಾಗಾರ

ಸಾಣೂರು: ವಿಶ್ವ ಯುವ ಕೌಶಲ್ಯ ದಿನಾಚರಣೆ ಮಾಹಿತಿ ಕಾರ್ಯಾಗಾರ

Date:

ಕಾರ್ಕಳ: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ ಉಡುಪಿ, ಯುವಕ ಮಂಡಲ (ರಿ.) ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಯುವ ಕೌಶಲ್ಯ ದಿನಾಚರಣೆ ಮಾಹಿತಿ ಕಾರ್ಯಾಗಾರ ಶನಿವಾರ ಸರಕಾರಿ ಪದವಿಪೂರ್ವ ಕಾಲೇಜು ಸಾಣೂರು ಇಲ್ಲಿ ನಡೆಯಿತು.

ಕಾರ್ಯಾಗಾರವನ್ನು ಸಾಣೂರು ಗ್ರಾಮ ಪಂಚಾಯತ್ ಸದಸ್ಯರಾದ ಯುವರಾಜ್ ಜೈನ್ ಉದ್ಘಾಟಿಸಿದರು. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಚೇತಾ ಕಾಮತ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಕುಮಾರ್, ಶಂಕರ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಉಪಸ್ಥಿತರಿದ್ದರು.

ಆತ್ಮನಿರ್ಭರ ಭಾರತ ಪರಿಕಲ್ಪನೆಯಲ್ಲಿ ಸ್ವಉದ್ಯೋಗ ವಿಷಯದ ಕುರಿತು ಉಡುಪಿ ಸಮೂಹ ಸಂಸ್ಥೆ ಮಣಿಪಾಲ ಉಪನ್ಯಾಸಕಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ ವಿಶೇಷ ಉಪನ್ಯಾಸ ನೀಡಿದರು. ಪಿಯುಸಿ ನಂತರ ಮುಂದೇನು ಎಂಬ ವಿಷಯದ ಕುರಿತು ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಮನಃಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ. ಚಂದ್ರಕಾಂತ ಗೋರೆ ಮಾತನಾಡಿ ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಿದರು.

ಮಂಡಲದ ಮಾಜಿ ಅಧ್ಯಕ್ಷರುಗಳಾದ ದೇವಾನಂದ್ ಶೆಟ್ಟಿ, ಪ್ರಕಾಶ್ ಮಡಿವಾಳ, ಸದಸ್ಯರಾದ ಅನಿಲ್ ಕೋಟ್ಯಾನ್, ಸೀತಾರಾಮ್, ಕಾಲೇಜಿನ ಉಪನ್ಯಾಸಕರು, ನೆಹರು ಯುವ ಕೇಂದ್ರದ ವರ್ಷಿತಾ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ಸ್ವಾಗತಿಸಿ, ಕೋಶಾಧಿಕಾರಿ ರಾಜೇಶ್ ಪೂಜಾರಿ ವಂದನಾರ್ಪಣೆಗೈದರು. ಯುವಕ ಮಂಡಲದ ಕಾರ್ಯದರ್ಶಿ ಮೋಹನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....

2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ

ಮಂಡ್ಯ, ಜು.26: ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ...
error: Content is protected !!