Friday, September 27, 2024
Friday, September 27, 2024

ನಿಸ್ವಾರ್ಥ ಸೇವೆಯಲ್ಲಿ ಸಾರ್ಥಕತೆಯಿದೆ: ಡಾ. ಕೆ. ಪ್ರಶಾಂತ್ ಶೆಟ್ಟಿ

ನಿಸ್ವಾರ್ಥ ಸೇವೆಯಲ್ಲಿ ಸಾರ್ಥಕತೆಯಿದೆ: ಡಾ. ಕೆ. ಪ್ರಶಾಂತ್ ಶೆಟ್ಟಿ

Date:

ಉಡುಪಿ: ಪ್ರತಿಯೊಬ್ಬರು ತಾವು ಮಾಡುವ ಸೇವೆಯಲ್ಲಿ ಸಾರ್ಥಕತೆ ಪಡೆದುಕೊಳ್ಳಬೇಕಾದರೆ, ಮಾಡುವ ಸೇವೆಯಲ್ಲಿ ನಿಸ್ವಾರ್ಥ ಮನೋಭಾವ ಹೊಂದಿರಬೇಕು ಎಂದು ಉಡುಪಿ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಡಾ. ಕೆ. ಪ್ರಶಾಂತ್ ಶೆಟ್ಟಿ ಹೇಳಿದರು.

ಅವರು ಸೋಮವಾರ ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ನಡೆದ ಘಟಕಾಧಿಕಾರಿಗಳ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಪೊಲೀಸ್, ಜಿಲ್ಲಾಡಳಿತ ಹಾಗೂ ಸರ್ಕಾರದ ಇತರ ಇಲಾಖೆಗಳಲ್ಲಿ, ಕಾನೂನು ಸುವ್ಯವಸ್ಥೆ, ಪ್ರಕೃತಿ ವಿಕೋಪ ಸೇರಿದಂತೆ ಅಗತ್ಯ ಸಂದರ್ಭಗಳಲ್ಲಿ ಸೇವೆ ಸಲ್ಲಿಸುವ ಪ್ರತಿಯೊಬ್ಬ ಗೃಹ ರಕ್ಷಕರಲ್ಲಿಯೂ ಸ್ವಯಂ ಸೇವಾ ಹಾಗೂ ನಿಸ್ವಾರ್ಥ ಮನೋಭಾವಗಳು ಜಾಗೃತವಾಗಿರಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕುಂದಾಪುರ, ಜಿಲ್ಲಾ ಉಪ ಕಮಾಂಡೆಂಟ್ ರಮೇಶ್, ಕಚೇರಿ ಅಧೀಕ್ಷಕಿ ಕವಿತಾ ಕೆ.ಸಿ, ಅಧಿಕಾರಿಗಳಾದ ಪ್ರಭಾಕರ ಸುವರ್ಣ ಕಾರ್ಕಳ, ಸ್ಟೀವನ್ ಪ್ರಕಾಶ್ ಬ್ರಹ್ಮಾವರ, ಕೆ. ಭಾಸ್ಕರ್ ಕುಂದಾಪುರ, ಕುಮಾರ ಉಡುಪಿ, ನವೀನ್ ಕುಮಾರ ಪಡುಬಿದ್ರಿ, ರಾಘವೇಂದ್ರ ಬೈಂದೂರು, ಶೇಖರ ಮಣಿಪಾಲ ಹಾಗೂ ಶ್ಯಾಮಲಾ ಎ ಉಪಸ್ಥಿತರಿದ್ದರು.

ಗೃಹ ರಕ್ಷಕ ದಳದ ಸೇವೆಯಲ್ಲಿ ಚಿನ್ನದ ಪದಕ ಪಡೆದುಕೊಂಡ ಡಾ. ಕೆ. ಪ್ರಶಾಂತ್ ಶೆಟ್ಟಿ ಹಾಗೂ ಕಾಪು ಘಟಕಾಧಿಕಾರಿ ಲಕ್ಷ್ಮೀನಾರಾಯಣ ರಾವ್ ಅವರನ್ನು ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.26: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ...

ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.26: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ...
error: Content is protected !!