Sunday, February 23, 2025
Sunday, February 23, 2025

ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 58ನೇ ಜನ್ಮ ನಕ್ಷತ್ರ

ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 58ನೇ ಜನ್ಮ ನಕ್ಷತ್ರ

Date:

ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 58ನೇ ಜನ್ಮದಿನ ಹಾಗೂ ಜನ್ಮ ನಕ್ಷತ್ರ ಕಾರ್ಯಕ್ರಮವನ್ನು ಉಡುಪಿ ಒಳಕಾಡಿನಲ್ಲಿರುವ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರರ ಮನೆಯಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಲಾಕ್ ಡೌನ್ ನಿಮಿತ್ತ ಸರಳ ರೀತಿಯಲ್ಲಿ ಕಾರ್ಯಕ್ರಮ ನಡೆಯಿತು. ವಿಶೇಷ ಪಾರಾಯಣದೊಂದಿಗೆ ಶ್ರೀಪಾದರ ಮೃತ್ತಿಕಾ ವೃಂದಾವನಕ್ಕೆ ಅಭಿಷೇಕ ಸಹಿತ ಪೂಜೆಯನ್ನು ಸಲ್ಲಿಸಲಾಯಿತು. ಕುಟುಂಬಿಕರು ಶ್ರೀಪಾದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಅಂತೆಯೇ ಕೇಮಾರು ಶ್ರೀ ಸಾಂದೀಪಿನಿ ಮಠದ ಶ್ರೀ ಈಶವಿಠಲದಾಸ ಸ್ವಾಮೀಜಿಯವರ ಕೇಮಾರು ಮಠದಲ್ಲಿ ಶ್ರೀಪಾದರ ಜನ್ಮದಿನದ ಪ್ರಯುಕ್ತ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು. ಪೂಜಾ ನಂತರ ಶ್ರೀಪಾದರ ಭಾವ ಚಿತ್ರಕ್ಕೆ ಕೇಮಾರು ಶ್ರೀಪಾದರು ಆರತಿ ಬೆಳಗಿದರು.

ತದನಂತರ ನುಡಿನಮನ ಸಲ್ಲಿಸಿದ ಕೇಮಾರು ಶ್ರೀಪಾದರು ನಲವತ್ತೆಂಟು ವರ್ಷಗಳ ಕಾಲ ಶ್ರೀಕೃಷ್ಣ ಶ್ರೀವಿಠಲ ಮುಖ್ಯಪ್ರಾಣ ದೇವರಿಗೆ ಪೂಜೆ ಸಲ್ಲಿಸಿ ಮೂರು ಪರ್ಯಾಯವನ್ನು ವೈಭವದಲ್ಲಿ ನೆರವೇರಿಸಿದ ಶಿರೂರು ಶ್ರೀಪಾದರು ಧಾರ್ಮಿಕವಾಗಿ ಸಾಮಾಜಿಕವಾಗಿ ಸಾಂಸ್ಕೃತಿಕವಾಗಿ ಬಹುವಿಧದ ಕೊಡುಗೆಗಳನ್ನು ಸಮಾಜಕ್ಕೆ ಸಲ್ಲಿಸಿದವರು. ದೀನ ದಲಿತರು ಬಡಬಗ್ಗರು ಕಲಾವಿದರ ಬಗ್ಗೆ ಶಿರೂರು ಶ್ರೀಪಾದರಿಗಿದ್ದ ಕಾಳಜಿ ಸ್ಮರಣೀಯ. ಕೊರೋನಾದ ಈ ಸಂಕಷ್ಟ ಕಾಲದಲ್ಲಿ ಅವರು ಇರುತ್ತಿದ್ದರೆ ತಕ್ಷಣ ಸ್ಪಂದಿಸಿ ಸಹಸ್ರಾರು ಮಂದಿಗೆ ಸಹಾಯದ ಹಸ್ತಚಾಚಿ ಉಪಕರಿಸುತ್ತಿದ್ದರು ಎಂದು ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿಯವರು ಶಿರೂರು ಶ್ರೀಪಾದರ ಸೇವೆಯನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಉಡುಪಿಯ ಆಚಾರ್ಯಾಸ್ ಏಸ್ ಹಾಗೂ ಶ್ರೀ ಶಿರೂರು ಮಠ ಭಕ್ತ ಸಮಿತಿಯ ಹಾಗೂ ದ್ವಾರಕಾನಾಥ್ ಲಕ್ಷ್ಮೀ ವೆಂಕಟೇಶ ಗ್ರಾಸರಿ ಇವರ ಆಶ್ರಯದಲ್ಲಿ ಉಡುಪಿ ಗಾಂಧಿ ಆಸ್ಪತೆಯ ಕೋರೋನ ವಾರಿಯರ್ಸ್ ಗೆ ಹಾಗೂ ಅಲ್ಲಿನ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಿಸಲಾಯಿತು. ಗಾಂಧಿ ಆಸ್ಪತ್ರೆಯ ಡಾ.ಹರಿಶ್ಚಂದ್ರ, ಡಾ.ವ್ಯಾಸರಾಜ ತಂತ್ರಿ ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಸೇವೆಗಳನ್ನು ನೆನಪಿಸಿಕೊಂಡರು. ಪಿ.ಲಾತವ್ಯ ಆಚಾರ್ಯ, ಸೊಂಡೂರು ಪ್ರಹ್ಲಾದ ಆಚಾರ್ಯ, ಪಿ.ವಾದಿರಾಜ ಆಚಾರ್ಯ, ಪಿ.ಶ್ರೀನಿವಾಸ ಆಚಾರ್ಯ, ಅಕ್ಷೋಭ್ಯ ಆಚಾರ್ಯ, ಅರ್ಜುನ್ ಆಚಾರ್ಯ ಹಾಗೂ ಶಿರೂರು ಶ್ರೀಪಾದರ ಪೂರ್ವಾಶ್ರಮದ ಕುಟುಂಬದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!