Sunday, September 22, 2024
Sunday, September 22, 2024

16ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಮಹಾಶಿವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

16ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಮಹಾಶಿವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಕಾರ್ಕಳ: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ನೇತೃತ್ವದಲ್ಲಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಮಾರ್ಚ್ 02 ರಂದು ಬುಧವಾರ ಜರಗಲಿರುವ 16ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಮಹಾಶಿವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಮಾತನಾಡಿದರು.

ಸಂಘದ ಪೂರ್ವಾಧ್ಯಕ್ಷ ಆನಂದ ಪೂಜಾರಿ, ಸಂಘದ ಅಂತರಿಕ ಲೆಕ್ಕಪರಿಶೋಧಕರಾದ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ವೇದಿಕೆಯಲ್ಲಿದ್ದರು. ಸಂಘದ ಪೂವಾಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ ಸ್ವಾಗತಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!