Monday, February 24, 2025
Monday, February 24, 2025

ಸಾಹಿತ್ಯಕ್ಕೆ ಚೌಕಟ್ಟಿನ ಹಂಗಿರಬಾರದು: ಅರ್ಚನಾ ಆರ್ಯ

ಸಾಹಿತ್ಯಕ್ಕೆ ಚೌಕಟ್ಟಿನ ಹಂಗಿರಬಾರದು: ಅರ್ಚನಾ ಆರ್ಯ

Date:

ಕೋಟ: ಸಾಹಿತ್ಯವನ್ನು ಚೌಕಟ್ಟಿನಲ್ಲಿ ಬಂಧಿಸದೇ ಸ್ವತಂತ್ರವಾಗಿ ಸಾಹಿತ್ಯ ರಚನೆಗೆ ತೊಡಗಿಸಿಕೊಂಡಾಗ ಉತ್ತಮ ಸಾಹಿತ್ಯ ಅನಾವರಣಗೊಳ್ಳಲು ಸಾಧ್ಯ. ಸಾಹಿತ್ಯ ಕೃತಿ ಸಂವಹನ ಕ್ರಿಯೆ ಆಗಬೇಕಾಗುತ್ತದೆ. ಪರಿಸ್ಥಿತಿಗೆ ತಕ್ಕ ಸುತ್ತಲಿನ
ಪರಿಸ್ಥಿತಿ ಹೇಗೆ ಇತ್ತು ಆ ಪರಿಸರ ಹೇಗೆ ಮಾರ್ಗದರ್ಶನ ನೀಡುತ್ತಿತ್ತು, ಆ ಪರಿಸರದಲ್ಲಿದ್ದ ಭಾಷೆ ಸಂವಹನಕ್ಕೆ ಒಳಪಟ್ಟಾಗ ಯಾವ ರೀತಿ ಮಾರ್ಪಟು ಹೊಂದುತ್ತಿತ್ತು ಈ ಎಲ್ಲಾ ವಿಚಾರಗಳು ಒಂದು ಸಾಹಿತ್ಯದ ಕೃತಿಯಿಂದ ತಿಳಿಯಲ್ಪಡುತ್ತದೆ. ಲೇಖಕನ ಭಾವನೆಗಳೇ ಅಕ್ಷರ ರೂಪದ ಸಾಹಿತ್ಯ ಎಂದು ಕನ್ನಡ ಉಪನ್ಯಾಸಕಿ, ಪರ್ಯಟಕಿ ಅರ್ಚನ ಆರ್ಯ ಹೇಳಿದರು.

ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್(ರಿ.) ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 17 ನೇ ವರ್ಷದ ಸಂಭ್ರಮದ ಸಾಹ್ಯಿತ್ಯಿಕ – ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021 (ಎಣೆಯಿಲ್ಲದ ಚಕಿತ) ಕಾರ್ಯಕ್ರಮದ ನಾಲ್ಕನೇ ದಿನದ ನುಡಿ ಚೇತನದಲ್ಲಿ ಮಾತನಾಡುತ್ತಿದ್ದರು.

ಆಯಾಕಾಲದ ಪ್ರಚೋದನೆಗಳಿಗೆ ಪ್ರತಿಕ್ರಿಯೆ ಅನ್ನೋ ಹಾಗೆ ಹೊರಹೊಮ್ಮಿದ ವಿಚಾರಗಳೇ ಸಾಹಿತ್ಯ. ಸಾಹಿತ್ಯಗಳು ನಮ್ಮೊಳಗಿನ ಭಾವನೆಗಳದಾಗ ಹೆಚ್ಚು ಜನರನ್ನು ತಲುಪಲು ಸಾಧ್ಯ. ಕನ್ನಡಿಯ ಪ್ರತಿಬಿಂಬದಂತೆ ಸಾಹಿತ್ಯವಿರಬೇಕು. ಅದು ಆತ್ಮ ನಿರೀಕ್ಷೆಗೆ ಒಳಪಡಿಸುತ್ತಿರಬೇಕು ಎಂದರು.

ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!