Monday, February 24, 2025
Monday, February 24, 2025

ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಿದ ಕಾರ್ಯದಿಂದ ನೆಮ್ಮದಿ: ರಾಜೇಶ್ ಐತಾಳ್

ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಿದ ಕಾರ್ಯದಿಂದ ನೆಮ್ಮದಿ: ರಾಜೇಶ್ ಐತಾಳ್

Date:

ಕೋಟ: ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಿದ ಕಾರ್ಯದಿಂದ ನಮಗೆ ಮನಸ್ಸಿನಲ್ಲಿ ನೆಮ್ಮದಿ ಸಿಗುತ್ತದೆ. ಸಮಾಜದಲ್ಲಿ ನಮ್ಮ ನಡುವೆ ಸುದ್ಧಿ ಇಲ್ಲದೇ ಸಮಾಜಮುಖಿ ಸೇವೆಗಳಲ್ಲಿ ತೊಡಗಿಸಿಕೊಂಡವರಿರುತ್ತಾರೆ, ಅಂತವರನ್ನು ಮುಖ್ಯವಾಹಿನಿಗೆ ಪರಿಚಯಿಸುವ ಕೆಲಸವಾಗಬೇಕು ಎಂದು ಪುರೋಹಿತ ರಾಜೇಶ್ ಐತಾಳ್ ಎತ್ತಿನಟ್ಟೆ ಹೇಳಿದರು.

ಅವರು ಶ್ರೀ ವಿನಾಯಕ ಯುವಕ ಮಂಡಲ(ರಿ.) ಸಾಯ್ಬ್ರಕಟ್ಟೆ-ಯಡ್ತಾಡಿ ಇವರ ಆಶ್ರಯದಲ್ಲಿ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ನಡೆದ 37 ವರ್ಷಗಳ ಕಾಲ ವಿದ್ಯಾರ್ಥಿ ವಸತಿ ನಿಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಜನಸ್ನೇಹಿ ತೇಜ ನಾಯ್ಕ್ ಅವರ ಅಭಿನಂದನಾ ಕಾರ್ಯಕ್ರಮ ತೇಜೋಮಯ-2021 (ನಳಪಾಕದ ನಡುಶಾಲೆ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಾಲಾಭಿವೃದ್ಧಿ ಅಧ್ಯಕ್ಷ ರವಿ ಶೆಟ್ಟಿ ಕೊಳ್ಕೆಬೈಲು ಮಾತಾನಾಡಿ, ತೇಜ ನಾಯ್ಕ ಅವರ ಏಳು- ಬೀಳು ಸಮಾನಾಗಿ ಸ್ವೀಕರಿಸಿ ಮುನ್ನೆಡೆದವರು. ಅವರ ಮುಂದಿನ ಜೀವನ ಸುಖವಾಗಿರಲಿ ಎಂದು ಹಾರೈಸಿದರು.

ಯುವಕ ಮಂಡಲದ ಅಧ್ಯಕ್ಷ ರತ್ನಾಕರ ಪೂಜಾರಿ, ಮಹಾತ್ಮ ಗಾಂಧಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ನಾಯ್ಕ್, ನೆಹರು ಯುವ ಕೇಂದ್ರ ಉಡುಪಿ ಇದರ ಪ್ರದೀಪ್, ಯುವಕ ಮಂಡಲದ ಕಾರ್ಯದರ್ಶಿ ಪ್ರಶಾಂತ್ ಸೂರ್ಯ, ಉಪಾಧ್ಯಕ್ಷ ರಾಜೇಶ್ ದೇವಾಡಿಗ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸದಸ್ಯ ಅಜಿತ್ ಕುಮಾರ್ ಪ್ರಸ್ತಾವಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!