Sunday, February 23, 2025
Sunday, February 23, 2025

ಅಧ್ಯಯನ ದೃಷ್ಟಿಯನ್ನು ಹೆಚ್ಚಿಸಿಕೊಳ್ಳಿ: ಆಸ್ಟ್ರೋ ಮೋಹನ್ ​

ಅಧ್ಯಯನ ದೃಷ್ಟಿಯನ್ನು ಹೆಚ್ಚಿಸಿಕೊಳ್ಳಿ: ಆಸ್ಟ್ರೋ ಮೋಹನ್ ​

Date:

ಛಾಯಾಗ್ರಹಣದಲ್ಲಿ ನಮ್ಮ ಅಧ್ಯಯನ ದೃಷ್ಟಿಯನ್ನು ಹೆಚ್ಚಿಸಿಕೊಳ್ಳಬೇಕು, ಅದರೊಂದಿಗೆ ಕಲಿಕಾ ಆಸಕ್ತಿಯೂ ನಮಗಿರಬೇಕು. ನಾವು ತೆಗೆದ ಛಾಯಾಚಿತ್ರಗಳನ್ನು ಪ್ರೀತಿಸಲು ಕಲಿಯಬೇಕು ಎಂದು ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಹೇಳಿದರು.

ಅವರು ಜಗನ್ನಾಥ ಸಭಾಭವನದಲ್ಲಿ ಬುಧವಾರ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಉಡುಪಿ ವಲಯ ಹಮ್ಮಿಕೊಂಡ “ಸ್ಟ್ರೀಟ್ ಫೋಟೋಗ್ರಫಿ’ ಕಾರ್ಯಗಾರ ಉದ್ಘಾಟಿಸಿ ಛಾಯಾಗ್ರಹಣ ಕ್ಷೇತ್ರವನ್ನು ಬಯಸಿ ಬಂದ ಮೇಲೆ ಬದುಕು ಕಟ್ಟಿಕೊಳ್ಳಲೂ ಉದ್ಯೋಗದೊಂದಿಗೆ ಹೆಸರನ್ನು ಮಾಡಿಕೊಳ್ಳಬೇಕು ಎಂದರು.

ಇತ್ತೀಚಿಗೆ ಅಗಲಿದ ಅಶೋಕ್ ಕುಮಾರ್ ಶೆಟ್ಟಿ ಹಾಗು ಸಬಾಸ್ಟಿನ್ ಅಂಚನ್ ರವರ ಗೌರವಾರ್ಥ ನುಡಿ ನಮನ ಹಾಗು ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿ ಜನಾರ್ದನ್ ಕೊಡವೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕೊಳಲಗಿರಿ, ವಲಯ ಕೋಶಾಧ್ಯಕ್ಷ ಪ್ರಸಾದ್ ಜತ್ತನ್ ಉಪಸ್ಥಿತರಿದ್ದರು.

ವಲಯಾಧ್ಯಕ್ಷ ಪ್ರಕಾಶ್ ಕೊಡಂಕೂರ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸುಕೇಶ್ ಕೆ. ಅಮೀನ್ ಧನ್ಯವಾದವಿತ್ತರು. ರಾಘವೇಂದ್ರ ಸೇರಿಗಾರ್ ನಿರೂಪಿಸಿದರು. ಆಸ್ಟ್ರೋ ಮೋಹನ್ ರವರಿಂದ ಸ್ಟ್ರೀಟ್ ಫೋಟೋಗ್ರಫಿ ಬಗ್ಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಕಾರ್ಯಗಾರ ನೆರವೇರಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!