Tuesday, September 24, 2024
Tuesday, September 24, 2024

ಅಧ್ಯಯನ ದೃಷ್ಟಿಯನ್ನು ಹೆಚ್ಚಿಸಿಕೊಳ್ಳಿ: ಆಸ್ಟ್ರೋ ಮೋಹನ್ ​

ಅಧ್ಯಯನ ದೃಷ್ಟಿಯನ್ನು ಹೆಚ್ಚಿಸಿಕೊಳ್ಳಿ: ಆಸ್ಟ್ರೋ ಮೋಹನ್ ​

Date:

ಛಾಯಾಗ್ರಹಣದಲ್ಲಿ ನಮ್ಮ ಅಧ್ಯಯನ ದೃಷ್ಟಿಯನ್ನು ಹೆಚ್ಚಿಸಿಕೊಳ್ಳಬೇಕು, ಅದರೊಂದಿಗೆ ಕಲಿಕಾ ಆಸಕ್ತಿಯೂ ನಮಗಿರಬೇಕು. ನಾವು ತೆಗೆದ ಛಾಯಾಚಿತ್ರಗಳನ್ನು ಪ್ರೀತಿಸಲು ಕಲಿಯಬೇಕು ಎಂದು ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಹೇಳಿದರು.

ಅವರು ಜಗನ್ನಾಥ ಸಭಾಭವನದಲ್ಲಿ ಬುಧವಾರ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಉಡುಪಿ ವಲಯ ಹಮ್ಮಿಕೊಂಡ “ಸ್ಟ್ರೀಟ್ ಫೋಟೋಗ್ರಫಿ’ ಕಾರ್ಯಗಾರ ಉದ್ಘಾಟಿಸಿ ಛಾಯಾಗ್ರಹಣ ಕ್ಷೇತ್ರವನ್ನು ಬಯಸಿ ಬಂದ ಮೇಲೆ ಬದುಕು ಕಟ್ಟಿಕೊಳ್ಳಲೂ ಉದ್ಯೋಗದೊಂದಿಗೆ ಹೆಸರನ್ನು ಮಾಡಿಕೊಳ್ಳಬೇಕು ಎಂದರು.

ಇತ್ತೀಚಿಗೆ ಅಗಲಿದ ಅಶೋಕ್ ಕುಮಾರ್ ಶೆಟ್ಟಿ ಹಾಗು ಸಬಾಸ್ಟಿನ್ ಅಂಚನ್ ರವರ ಗೌರವಾರ್ಥ ನುಡಿ ನಮನ ಹಾಗು ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿ ಜನಾರ್ದನ್ ಕೊಡವೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕೊಳಲಗಿರಿ, ವಲಯ ಕೋಶಾಧ್ಯಕ್ಷ ಪ್ರಸಾದ್ ಜತ್ತನ್ ಉಪಸ್ಥಿತರಿದ್ದರು.

ವಲಯಾಧ್ಯಕ್ಷ ಪ್ರಕಾಶ್ ಕೊಡಂಕೂರ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸುಕೇಶ್ ಕೆ. ಅಮೀನ್ ಧನ್ಯವಾದವಿತ್ತರು. ರಾಘವೇಂದ್ರ ಸೇರಿಗಾರ್ ನಿರೂಪಿಸಿದರು. ಆಸ್ಟ್ರೋ ಮೋಹನ್ ರವರಿಂದ ಸ್ಟ್ರೀಟ್ ಫೋಟೋಗ್ರಫಿ ಬಗ್ಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಕಾರ್ಯಗಾರ ನೆರವೇರಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಮಯದಲ್ಲಿ ಕಾವೇರಿ ಐದನೇ ಹಂತಕ್ಕೆ ಚಾಲನೆ: ಡಿಕೆಶಿ

ಬೆಂಗಳೂರು, ಸೆ.24: ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ...

ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ

ಬೆಂಗಳೂರು, ಸೆ.24: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್‌ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ...

ಸೆ.26: ಕೆಎಚ್‌ಐಆರ್‌ ಸಿಟಿ ಮೊದಲ ಹಂತಕ್ಕೆ ಚಾಲನೆ

ಬೆಂಗಳೂರು, ಸೆ.24: ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರಗಳು ಒಂದೆಡೇ...

ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಠಾಣೆಗಳಲ್ಲಿ ಪ್ರತ್ಯೇಕ ತಂಡ

ಬೆಂಗಳೂರು, ಸೆ.24: ಫೇಕ್‌ ನ್ಯೂಸ್‌ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ...
error: Content is protected !!