Sunday, August 30, 2026
Sunday, August 30, 2026

ಬೀದಿ ನಾಟಕದ ಮೂಲಕ ಅರಿವು

ಬೀದಿ ನಾಟಕದ ಮೂಲಕ ಅರಿವು

Date:

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ಮಂದಾರ (ರಿ.) ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಗಾಂಧಿನಗರ ಬೈಕಾಡಿ ವತಿಯಿಂದ ಎರಡು ದಿನಗಳ ಕಾಲ ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪೃಶ್ಯತೆ ಕುರಿತು ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶಿಸಲಾಯಿತು.

ಉಪ್ಪಿನಕೋಟೆ ನಿಲ್ದಾಣದಿಂದ ಪ್ರಾರಂಭಗೊಂಡು ಸರಕಾರಿ ಪ್ರೌಢಶಾಲೆ ಬ್ರಹ್ಮಾವರ, ಪಾಂಡೇಶ್ವರ ಪ್ರಾಥಮಿಕ ಶಾಲೆಯ ಮೈದಾನ, ಸಾಲಿಗ್ರಾಮ ಬಸ್ ನಿಲ್ದಾಣ, ಕೊಮೆ ತೆಕ್ಕಟ್ಟೆಯ ಶನೀಶ್ವರ ದೇವಸ್ಥಾನ ಹತ್ತಿರ, ಕೋಟೇಶ್ವರ ಬಸ್ ನಿಲ್ದಾಣ, ಕುಂದಾಪುರದ ಶಾಸ್ತ್ರಿ ಸರ್ಕಲ್, ಬಾಳಿಗ ಮೆಡಿಕಲ್ ಸೆಂಟರ್ ಆವರಣದಲ್ಲಿ, ಬಿರ್ತಿ ವಟಾರದಲ್ಲಿ, ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ಹೀಗೆ ಸುಮಾರು ಹತ್ತಕ್ಕೂ ಅಧಿಕ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಗೊಂಡು ಸಾರ್ವಜನಿಕರಿಂದ ಪ್ರಶಂಸಿಸಲ್ಪಟ್ಟಿತು.

ಜನವರಿ 29ರಂದು ಈ ಬೀದಿ ನಾಟಕ ತಯಾರಿ ಕಾರ್ಯಕ್ರಮ ಉದ್ಘಾಟನೆಗೊಂಡು ರೋಹಿತ್ ಎಸ್ ಬೈಕಾಡಿ ಅವರ ನಿರ್ದೇಶನದಲ್ಲಿ ಸುಮಾರು ಒಂದು ವಾರಗಳ ತರಬೇತಿಯಲ್ಲಿ ಈ ಬೀದಿ ನಾಟಕ ತಯಾರಿಸಲಾಗಿದ್ದು, ಜನಪದ ಕಲಾವಿದ ಪ್ರಶಾಂತ್ ಬಿರ್ತಿ, ದಿನೇಶ್ ಎಸ್. ಬೈಕಾಡಿ ಹಾಗೂ ರಂಗಕರ್ಮಿ ಪ್ರಸಾದನ ಕಲಾವಿದ ರಮೇಶ್ ಕಪಿಲೇಶ್ವರ ಅವರು ಈ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!