Monday, February 24, 2025
Monday, February 24, 2025

ವಿದ್ಯಾರ್ಥಿಗಳಿಗೆ ಲಸಿಕೆ ಕುರಿತು ಮಹತ್ವದ ಮಾಹಿತಿ

ವಿದ್ಯಾರ್ಥಿಗಳಿಗೆ ಲಸಿಕೆ ಕುರಿತು ಮಹತ್ವದ ಮಾಹಿತಿ

Date:

ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿ ಸರ್ಕಾರದ ಆದೇಶದನ್ವಯ 18 ರಿಂದ 44 ವರ್ಷ ವಯೋಮಾನದವರಲ್ಲಿ ಆದ್ಯತೆ ಗುಂಪುಗಳನ್ನು ಗುರುತಿಸಿ, ಕೋವಿಡ್ -19 ಲಸಿಕಾಕರಣವು ಸಮರೋಪಾದಿಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಮುಂದುವರೆದು ದಿನಾಂಕ: 23.06.2021 ರ ಸರ್ಕಾರದ ಆದೇಶ ಸಂಖ್ಯೆ: ಎನ್.ಹೆಚ್.ಎಂ / ಡಿಡಿ / ಐಎಂಎಂ/2021-22 ರಲ್ಲಿ ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಪ್ರಾರಂಭವಾಗುತ್ತಿರುವುದರಿಂದ, ವಿದ್ಯಾರ್ಥಿಗಳಲ್ಲಿ ಆತ್ಮ ಸ್ದೈರ್ಯ ತುಂಬಲು ಕಾಲೇಜುಗಳು ಪ್ರಾರಂಭವಾಗುವ ಪೂರ್ವವಾಗಿ ಪದವಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾಕರಣ ನಡೆಸುವಂತೆ ತಿಳಿಸಲಾಗಿರುತ್ತದೆ.

ಆದರೆ ಉಡುಪಿ ಜಿಲ್ಲೆಯಲ್ಲಿ ವಾಸ್ತವ್ಯ ಹೊಂದಿ ಇತರ ಜಿಲ್ಲೆ / ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಾವು ವಾಸ್ತವ್ಯ ಹೊಂದಿರುವ ಉಡುಪಿ ಜಿಲ್ಲೆಯಲ್ಲಿಯೇ ಲಸಿಕಾಕರಣವನ್ನು ನಡೆಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈ ಬಗ್ಗೆ ವಿವರಗಳನ್ನು ಸಂಗ್ರಹಿಸುವುದು ಅವಶ್ಯಕವಾಗಿದ್ದು, ಕೋವಿಡ್-19 ಲಸಿಕೆಯನ್ನು ಪಡೆಯಲಿಚ್ಚಿಸುವ ಉಡುಪಿ ಜಿಲ್ಲೆಯಲ್ಲಿ ವಾಸ್ತವ್ಯ ಹೊಂದಿ, ಅನ್ಯ ಜಿಲ್ಲೆ / ರಾಜ್ಯದಲ್ಲಿ ವ್ಯಾಸಂಗ ನಡೆಸುತ್ತಿರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ತಮ್ಮ ವಿವರಗಳನ್ನು ಈ ಕೆಳಗೆ ತಿಳಿಸಿರುವ ಲಿಂಕ್ ನಲ್ಲಿ ಭರ್ತಿ ಮಾಡಲು ಕೋರಲಾಗಿದೆ.

ಲಸಿಕೆ ಲಭ್ಯತೆಗಳನ್ನು ಮುಂದಿನ ದಿನಗಳಲ್ಲಿ ಪತ್ರಿಕೆ ಮುಖಾಂತರ ತಿಳಿಸಲಾಗುವುದು ಹಾಗೂ ಎಸ್.ಎಂ.ಎಸ್ ಕಳುಹಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಲಿಂಕ್:
https://docs.google.com/forms/d/e/1FAIpQLScLntiRTE7JnvnT-AwcllzmrrLCZe2aCkN_gu3U13VcnG8cug/viewform

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!