Saturday, September 21, 2024
Saturday, September 21, 2024

ಮಾನಸಿಕ ಆರೋಗ್ಯಕ್ಕೆ ‘ಮಾತು’ ರಹದಾರಿ: ವಿವೇಕ್ ಆಳ್ವ

ಮಾನಸಿಕ ಆರೋಗ್ಯಕ್ಕೆ ‘ಮಾತು’ ರಹದಾರಿ: ವಿವೇಕ್ ಆಳ್ವ

Date:

ವಿದ್ಯಾಗಿರಿ (ಮೂಡುಬಿದಿರೆ): ನಿರಂತರ ಮೌನವು ಮನುಷ್ಯನನ್ನು ಮಾನಸಿಕ ಅಸ್ವಸ್ಥತೆಗೆ ಕೊಂಡೊಯ್ಯುತ್ತದೆ. ಅದು ವ್ಯಕ್ತಿಯನ್ನು ಆಂತರಿಕವಾಗಿ ಕೊಲ್ಲುತ್ತದೆ. ಇಂತಹ ಸಂದಿಗ್ಧ ಅಸ್ವಸ್ಥತೆಯಿಂದ ಹೊರಬರಲು ‘ಮಾತು’ ಪರಿಹಾರ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಶುಕ್ರವಾರ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ‘ಆತ್ಮಹತ್ಯೆ ತಡೆಗಟ್ಟುವ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು. ನ್ಯೂನತೆಯನ್ನು ನಿಂದಿಸುವ ಮನೋಭಾವ ಸಲ್ಲದು. ನೊಂದವರಿಗೆ ಸ್ಪಂದಿಸುವ ಮೂಲಕ ಅವರ ಬದುಕಿಗೆ ಆಸರೆಯಾಗಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಒಂದು ಚಿಕ್ಕ ಸಹಕಾರವು ದೊಡ್ಡ ಪರಿಣಾಮವನ್ನು ಬೀರುತ್ತದೆ, ಮಾನಸಿಕವಾಗಿ ಕುಗ್ಗಿ ಹೋದವರಿಗೆ ನಿಮ್ಮಿಂದ ಆದಷ್ಟು ಸಹಕರಿಸಬೇಕು ಎಂದರು.

ಮನುಷ್ಯನಿಗೆ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ ಒಂದು ಸಮಸ್ಯೆ ಹೆಮ್ಮರವಾಗಿ ಬೆಳೆಯುವುದರಿಂದ ಮಾನಸಿಕ ಸ್ಥೈರ್ಯ ಕುಗ್ಗುತ್ತದೆ. ಅವರಿಗೆ ಧೈರ್ಯ ತುಂಬಿದಾಗ ಅತ್ಮಹತ್ಯೆಯನ್ನು ತಡೆಯಲು ಸಾಧ್ಯ. ಯಾವುದೇ ಸಮಸ್ಯೆ ಶಾಶ್ವತವಲ್ಲ. ಅದು ಆ ಕ್ಷಣ ಅಥವಾ ಸಂದರ್ಭಕ್ಕೆ ಮಾತ್ರ ಸೀಮಿತ ಎಂದು ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಮನೋಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅರುಣ್ ಭಟ್ ಪಿ. ಹೇಳಿದರು.

ಯುವಜನತೆಯಲ್ಲಿ ಆತ್ಮಹತ್ಯೆ ತಡೆ ಕುರಿತು ಕಾರ್ಯಾಗಾರ ನಡೆಯಿತು. ಎನ್.ಐ.ಪಿ.ಎಂ ಕಾರ್ಯಕಾರಿ ಸಮಿತಿಯ ಸದಸ್ಯ ರೊನಾಲ್ಡ್ ಮಸ್ಕರೇನಸ್, ಖಜಾಂಚಿ ಸಂತೋಷ ಪೈ, ಮಂಗಳೂರಿನ ‘ಮನಶಾಂತಿ’ಯ ಮಾನಸಿಕ ಆರೋಗ್ಯ ತಜ್ಞೆ ರಮೀಳಾ ಶೇಖರ್, ಸುನಿತಾ ವಿಠ್ಠಲ್ ಇದ್ದರು. ವಿದ್ಯಾರ್ಥಿನಿ ಸಂಧ್ಯಾ ವಂದಿಸಿದರು. ಸುಧೀಕ್ಷಾ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!