ಶಿರಸಿ: ಎ.ವಿ ಬಾಳಿಗ ಮೆಮೋರಿಯಲ್ ಆಸ್ಪತ್ರೆ ಉಡುಪಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ರೋಟರಿ ಮಣಿಪಾಲ, ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಾಡೋಜ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಇವರನ್ನು ಅಂಕೋಲದ ಅವರ ಸ್ವಗೃಹದಲ್ಲಿ ರೂಪಾಯಿ ಐದು ಸಾವಿರ ಗೌರವಧನದೊಂದಿಗೆ ಇಂದು ಗೌರವಿಸಲಾಯಿತು. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರವಿರಾಜ್ ಎಚ್.ಪಿ, ರಾಘವೇಂದ್ರ ಪ್ರಭು ಕರ್ವಾಲು, ಮಂಜುನಾಥ್ ಶಿರಸಿ ಉಪಸ್ಥಿತರಿದ್ದರು.
ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರಿಗೆ ಗೌರವ

ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರಿಗೆ ಗೌರವ
Date: