Monday, February 24, 2025
Monday, February 24, 2025

ಸುರಗಂಗೆ ಪುಸ್ತಕ ಬಿಡುಗಡೆ

ಸುರಗಂಗೆ ಪುಸ್ತಕ ಬಿಡುಗಡೆ

Date:

ಪಂಚಭಾಷಾ ಲೇಖಕಿ ಪಾರ್ವತಿ ಜಿ ಐತಾಳ್ ವಿಶೇಷವಾಗಿ ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿರುವ ಸೇವೆ ಅನುಪಮವಾದದ್ದು. ಅವರ ಸಾಧನೆ ಸದಾಕಾಲ ಪ್ರೇರಣೆ ನೀಡುವಂತದ್ದು. ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಮತ್ತಷ್ಟು ಎತ್ತರದ ಮನ್ನಣೆ ಸಿಗಲೇಬೇಕಿದೆ ಎಂದು ಸಾಹಿತಿ ಪೂರ್ಣಿಮಾ ಸುರೇಶ್ ಅಭಿಪ್ರಾಯಪಟ್ಟರು. ಅವರು ಕುಂದಾಪುರದ ಜನಪ್ರತಿನಿಧಿ ಪ್ರಕಾಶನ ಹೊರತಂದಿರುವ ನರೇಂದ್ರ ಎಸ್. ಗಂಗೊಳ್ಳಿ ಸಂಪಾದಕತ್ವದ ಡಾ. ಪಾರ್ವತಿ ಜಿ ಐತಾಳ್ ಅವರ ಸಮಗ್ರ ಕೃತಿಗಳ ಪರಿಚಯವುಳ್ಳ ‘ಸುರಗಂಗೆ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಅನುವಾದ ಕ್ಷೇತ್ರದಲ್ಲೂ ಕೂಡ ತಮ್ಮ ಸ್ವಂತಿಕೆಯಿಂದ ಕೃತಿಗಳಿಗೆ ಜೀವ ತುಂಬುವ ಪಾರ್ವತಿ ಐತಾಳ್ ಸಾಹಿತ್ಯ ತಪಸ್ವಿನಿ. ಹೊಸ ಚಿಗುರುಗಳನ್ನು ಬೆಳೆಸುವಲ್ಲಿ ಅವರ ಕಾರ್ಯವೈಖರಿ ಅಭಿನಂದನೀಯ ಎಂದು ಅವರು ಹೇಳಿದರು.

ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಮತ್ತು ಲೇಖಕಿ ಸುಮತಿ ಶೆಣೈ ಶುಭಾಶಂಸನೆಗೈಯುತ್ತ ಮಾತನಾಡಿ, ಇಂಥ ಪುಸ್ತಕಗಳು ಉದಯೋನ್ಮುಖ ಬರಹಗಾರರಿಗೆ ಬಹುದೊಡ್ಡ ಪ್ರೇರಣೆಯನ್ನು ನೀಡುತ್ತವೆ. ಇದು ಹೆಚ್ಚೆಚ್ಚು ಜನರನ್ನು ತಲುಪುವಂತಾಗಬೇಕು ಎಂದು ಹೇಳಿದರು.

ಪುಸ್ತಕದ ಸಹ ಸಂಪಾದಕ ನಾಗರಾಜ್ ವಂಡ್ಸೆ, ಲೇಖಕಿ ಪಾರ್ವತಿ ಜಿ ಐತಾಳ್, ಗಂಗಾಧರ ಐತಾಳ್ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜನಪ್ರತಿನಿಧಿ ಪ್ರಕಾಶನದ ವತಿಯಿಂದ ಪೂರ್ಣಿಮ ಸುರೇಶ್, ಸುಮತಿ ಶೆಣೈ ಮತ್ತು ನರೇಂದ್ರ ಎಸ್ ಗಂಗೊಳ್ಳಿ ಇವರನ್ನು ಸನ್ಮಾನಿಸಲಾಯಿತು.

‘ಸುರಗಂಗೆ’ಯ ಪ್ರಧಾನ ಸಂಪಾದಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪುಸ್ತಕದ ಪ್ರಕಾಶಕರಾದ ಸುಬ್ರಹ್ಮಣ್ಯ ಪಡುಕೋಣೆ ಸ್ವಾಗತಿಸಿ, ಸಹ ಸಂಪಾದಕ ಶ್ರೀರಾಜ್ ಆಚಾರ್ಯ ಧನ್ಯವಾದಗೈದರು. ವಿನಯ ಕೌಂಜೂರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!